<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಡಿ ಬಂಧಿಸಲಾಗಿದ್ದ ಆದಿತ್ಯ ಆಳ್ವ ಕಸ್ಟಡಿಗೆ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>‘ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಆದಿತ್ಯನನ್ನು ಚೆನ್ನೈನಲ್ಲಿ ಬಂಧಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿತ್ತು. ಅವಧಿ ಮುಗಿದಿದ್ದರಿಂದ ಆತನನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>‘ವಿಚಾರಣೆ ನಡೆಸಿದ ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಆತ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದಾನೆ’ ಎಂದೂ ಮೂಲಗಳು ಹೇಳಿವೆ.</p>.<p>‘ಆದಿತ್ಯ ಆಳ್ವ ವಿಚಾರಣೆ ವೇಳೆ ಯಾವುದೇ ಮಹತ್ವದ ಮಾಹಿತಿ ನೀಡಿಲ್ಲ. ತಲೆಮರೆಸಿಕೊಂಡಿದ್ದ ಆತನಿಗೆ ಯಾರೆಲ್ಲ ಸಹಕಾರ ನೀಡಿದ್ದರು ಎಂಬ ಬಗ್ಗೆಯೂ ಬಾಯ್ಬಿಟ್ಟಿಲ್ಲ’ ಎಂದೂ ಮೂಲಗಳು ತಿಳಿಸಿವೆ.</p>.<p>ಆದಿತ್ಯ ಅಗರ್ವಾಲ್ ಕಸ್ಡಡಿಗೆ: ‘ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ದೆಹಲಿಯ ವಿರೇನ್ ಖನ್ನಾ ಜೊತೆ ಒಡನಾಟ ಹೊಂದಿ, ಡ್ರಗ್ಸ್ ಪಾರ್ಟಿ ಆಯೋಜನೆಗೆ ಸಹಕರಿಸಿದ್ದ ಆರೋಪದಡಿ ಆದಿತ್ಯ ಅಗರ್ವಾಲ್ ಎಂಬಾತನನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿದ್ದ ಆದಿತ್ಯ ಅಗರ್ವಾಲ್ಗೆ ಇತ್ತೀಚೆಗಷ್ಟೇ ಜಾಮೀನು ಸಿಕ್ಕಿತ್ತು. ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಬಗ್ಗೆ ಕಾಟನ್ಪೇಟೆ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಸದ್ಯ ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ವಿದೇಶಿ ಪ್ರಜೆ ಬಂಧನ: ‘ಪಾರ್ಟಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದಡಿ ವಿದೇಶಿ ಪ್ರಜೆ ಚಿಡಿಬೈರ್ ಆ್ಯಮರೋಸ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ಕಾಗದ ಚೂರು ರೂಪದಲ್ಲಿದ್ದ 2 ಗ್ರಾಂ ಎಲ್ಎಸ್ಡಿ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ಆದಿತ್ಯ ಆಳ್ವ ಹಲವು ಪೆಡ್ಲರ್ ಜೊತೆ ಒಡನಾಟ ಹೊಂದಿದ್ದ. ಅವರ ಮೂಲಕ ಡ್ರಗ್ಸ್ ತರಿಸಿ ಪಾರ್ಟಿಯಲ್ಲಿ ಹಂಚುತ್ತಿದ್ದ. ತನ್ನದೇ ರೆಸಾರ್ಟ್ನಲ್ಲಿ ಆತ ಹಲವು ಬಾರಿ ಪಾರ್ಟಿ ಮಾಡಿರುವ ಮಾಹಿತಿ ಇದೆ’ ಎಂದೂ ತಿಳಿಸಿವೆ.</p>.<p>‘ಇದೇ ಪ್ರಕರಣದಲ್ಲಿ ಪೆಡ್ಲರ್ಗಳಾದ ಲೂಮ್ ಪೆಪ್ಪರ್, ಚೀಫ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇದೀಗ ಚಿಡಿಬೈರ್ ಎಂಬಾತನನ್ನೂ ಸೆರೆ ಹಿಡಿಯಲಾಗಿದೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದ್ದು, ಅವರಿಗಾಗಿ ಹುಡುಕಾಟ ನಡೆದಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಡಿ ಬಂಧಿಸಲಾಗಿದ್ದ ಆದಿತ್ಯ ಆಳ್ವ ಕಸ್ಟಡಿಗೆ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>‘ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಆದಿತ್ಯನನ್ನು ಚೆನ್ನೈನಲ್ಲಿ ಬಂಧಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿತ್ತು. ಅವಧಿ ಮುಗಿದಿದ್ದರಿಂದ ಆತನನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>‘ವಿಚಾರಣೆ ನಡೆಸಿದ ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಆತ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದಾನೆ’ ಎಂದೂ ಮೂಲಗಳು ಹೇಳಿವೆ.</p>.<p>‘ಆದಿತ್ಯ ಆಳ್ವ ವಿಚಾರಣೆ ವೇಳೆ ಯಾವುದೇ ಮಹತ್ವದ ಮಾಹಿತಿ ನೀಡಿಲ್ಲ. ತಲೆಮರೆಸಿಕೊಂಡಿದ್ದ ಆತನಿಗೆ ಯಾರೆಲ್ಲ ಸಹಕಾರ ನೀಡಿದ್ದರು ಎಂಬ ಬಗ್ಗೆಯೂ ಬಾಯ್ಬಿಟ್ಟಿಲ್ಲ’ ಎಂದೂ ಮೂಲಗಳು ತಿಳಿಸಿವೆ.</p>.<p>ಆದಿತ್ಯ ಅಗರ್ವಾಲ್ ಕಸ್ಡಡಿಗೆ: ‘ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ದೆಹಲಿಯ ವಿರೇನ್ ಖನ್ನಾ ಜೊತೆ ಒಡನಾಟ ಹೊಂದಿ, ಡ್ರಗ್ಸ್ ಪಾರ್ಟಿ ಆಯೋಜನೆಗೆ ಸಹಕರಿಸಿದ್ದ ಆರೋಪದಡಿ ಆದಿತ್ಯ ಅಗರ್ವಾಲ್ ಎಂಬಾತನನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿದ್ದ ಆದಿತ್ಯ ಅಗರ್ವಾಲ್ಗೆ ಇತ್ತೀಚೆಗಷ್ಟೇ ಜಾಮೀನು ಸಿಕ್ಕಿತ್ತು. ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಬಗ್ಗೆ ಕಾಟನ್ಪೇಟೆ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಸದ್ಯ ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ವಿದೇಶಿ ಪ್ರಜೆ ಬಂಧನ: ‘ಪಾರ್ಟಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದಡಿ ವಿದೇಶಿ ಪ್ರಜೆ ಚಿಡಿಬೈರ್ ಆ್ಯಮರೋಸ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ಕಾಗದ ಚೂರು ರೂಪದಲ್ಲಿದ್ದ 2 ಗ್ರಾಂ ಎಲ್ಎಸ್ಡಿ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ಆದಿತ್ಯ ಆಳ್ವ ಹಲವು ಪೆಡ್ಲರ್ ಜೊತೆ ಒಡನಾಟ ಹೊಂದಿದ್ದ. ಅವರ ಮೂಲಕ ಡ್ರಗ್ಸ್ ತರಿಸಿ ಪಾರ್ಟಿಯಲ್ಲಿ ಹಂಚುತ್ತಿದ್ದ. ತನ್ನದೇ ರೆಸಾರ್ಟ್ನಲ್ಲಿ ಆತ ಹಲವು ಬಾರಿ ಪಾರ್ಟಿ ಮಾಡಿರುವ ಮಾಹಿತಿ ಇದೆ’ ಎಂದೂ ತಿಳಿಸಿವೆ.</p>.<p>‘ಇದೇ ಪ್ರಕರಣದಲ್ಲಿ ಪೆಡ್ಲರ್ಗಳಾದ ಲೂಮ್ ಪೆಪ್ಪರ್, ಚೀಫ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇದೀಗ ಚಿಡಿಬೈರ್ ಎಂಬಾತನನ್ನೂ ಸೆರೆ ಹಿಡಿಯಲಾಗಿದೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದ್ದು, ಅವರಿಗಾಗಿ ಹುಡುಕಾಟ ನಡೆದಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>