ಈ ಬಾರಿ ವಿಧಾನಸಭೆಯಲ್ಲಿ ಪ್ರಮುಖವಾಗಿ ಗೋಹತ್ಯೆ ನಿಷೇಧ ಮಸೂದೆ, ಬಿಬಿಎಂಪಿ ಮಸೂದೆ, ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ ಅಂಗೀಕಾರಗೊಂಡವು. ವಿಧಾನಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ಮಸೂದೆ ಮತ್ತು ಭೂಸುಧಾರಣಾ ತಿದ್ದುಪಡಿ ಮಸೂದೆಗಳಿಗೆ ಒಪ್ಪಿಗೆ ಸಿಕ್ಕಿತು. ಇವೆರಡಕ್ಕೂ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿತ್ತು. ಆದರೆ, ಪರಿಷತ್ತಿನಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆಯಾಗಲಿಲ್ಲ.