‘ಕೋವಿಡ್ ಚಿಕಿತ್ಸೆಯಲ್ಲಿ ದೊಡ್ಡ ಆಸ್ಪತ್ರೆಗಳಲ್ಲಿ ಶೋಷಣೆ ತಪ್ಪಿಸಲು ವಿಫಲವಾಗಿರುವ ಆರೋಗ್ಯ ಸಚಿವ, ಆಸ್ಪತ್ರೆಗಳ ಆಡಳಿತ ಮಂಡಳಿ ಜೊತೆ ರಾಜಿ ಸಂಧಾನ ಮಾಡುತ್ತಿರುವುದು ದಂಧೆಯ ಸಂಕೇತವಲ್ಲವೇ’ ಎಂದು ಪ್ರಶ್ನಿಸಿರುವ ಅವರು, ‘ಬಿಜೆಪಿ ರಾಷ್ಟ್ರೀಯ ಘಟಕ ರಾಷ್ಟ್ರೀಯ ಮಟ್ಟದಲ್ಲಿ ಭ್ರಷ್ಟಾಚಾರದ ವಿಷಯದಲ್ಲಿ ವಿಶ್ವವಿದ್ಯಾಲಯ ತೆರೆಯುವ ಉದ್ದೇಶವಿದ್ದರೆ ಇವರನ್ನೇ ಕುಲಪತಿಯಾಗಿ ನೇಮಿಸಲಿ’ ಎಂದೂ ವ್ಯಂಗ್ಯವಾಡಿದ್ದಾರೆ.