ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಸ್ವೀಕರಿಸಿದ್ದಾರೆ. ಕೆಲ ನಿರ್ಣಯಗಳನ್ನು ಇಲಾಖಾ ಹಂತದಲ್ಲಿಯೇ ಕೈಗೊಳ್ಳಬಹುದು. ಮತ್ತೆ ಕೆಲವು ಸಂಪುಟ ಸಭೆಯಲ್ಲಿ ಚರ್ಚಿಸಬೇಕಾಗುತ್ತದೆ
– ಆರ್.ವಿ.ದೇಶಪಾಂಡೆ, ಕರ್ನಾಟಕ ಆಡಳಿತ ಸುಧಾರಣಾ ಆಯೋಗ–2ರ ಅಧ್ಯಕ್ಷ
ಹಳೆಯ ಯೋಜನೆಗಳು ಬಂದ್
ಕೆಲವು ಸರ್ಕಾರಿ ಯೋಜನೆಗಳಿಗೆ ಬಜೆಟ್ನಿಂದ ಅನುದಾನವೂ ಇಲ್ಲ ಜನರಿಗೂ ಅನುಕೂಲವಾಗುತ್ತಿಲ್ಲ. ಈ ರೀತಿ ಅಂದಾಜು ಒಂದು ಸಾವಿರ ಯೋಜನೆಗಳನ್ನು ಗುರುತಿಸಲಾಗಿದೆ. ಐವತ್ತು ವರ್ಷಗಳ ಹಿಂದೆ ಆರಂಭಿಸಿರುವ ಯೋಜನೆಗಳನ್ನು ನಿಲ್ಲಿಸಬೇಕು. ಇದರಿಂದ ಆರ್ಥಿಕ ಹೊರೆಯಾಗುತ್ತಿದೆ. ಈ ಬಗ್ಗೆ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಆರ್.ವಿ.ದೇಶಪಾಂಡೆ ತಿಳಿಸಿದರು.