<p><strong>ಬೆಂಗಳೂರು: </strong>‘ದೇಶದ ಬಹುತೇಕ ಪಶು ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಆಧುನಿಕ ರೋಗನಿರ್ಣಯ (ಡಯಾಗ್ನೋಸ್ಟಿಕ್) ಕೇಂದ್ರಗಳ ಕೊರತೆ ಇದೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಮನ ಹರಿಸಬೇಕು’ ಎಂದು ಕೇರಳದಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್.ಸಸೀಂದ್ರನಾಥ್ ತಿಳಿಸಿದರು.</p>.<p>ಬೀದರ್ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆವಿಎಎಫ್ಎಸ್ಯು) ಹಾಗೂ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜು ಸಹಯೋಗದಲ್ಲಿಬುಧವಾರ ಆಯೋಜಿಸಿದ್ದಭಾರತೀಯ ಪಶು ಔಷಧ ಸಂಸ್ಥೆಯ ವಾರ್ಷಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಈಚೆಗೆ ಸಂಭವಿಸುತ್ತಿರುವ ಮಾರಕ ಕಾಯಿಲೆಗಳ ಹರಡುವಿಕೆಯಲ್ಲಿಪ್ರಾಣಿಗಳ ಪಾತ್ರವೂ ಇದೆ. ಜಾಗತಿಕ ತಾಪಮಾನ ಹೆಚ್ಚಳದಿಂದ ಹಾಲು, ಮಾಂಸ ಹಾಗೂ ಮೊಟ್ಟೆ ಉತ್ಪಾದನೆಯಲ್ಲಿ ಏರುಪೇರಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಜನಸಂಖ್ಯೆ ಹೆಚ್ಚುತ್ತಿರುವಂತೆ ಪ್ರಾಣಿಗಳ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ. ಜನರ ಆರೋಗ್ಯ ಸುಧಾರಣೆಗೆ ಕೊಡುವ ಆದ್ಯತೆಯನ್ನು ಪ್ರಾಣಿಗಳಿಗೂ ನೀಡಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲ ಪಶುವೈದ್ಯಕೀಯ ಸಂಸ್ಥೆಗಳು ಗಮನಹರಿಸಬೇಕು’ ಎಂದರು.</p>.<p>ಕೆವಿಎಎಫ್ಎಸ್ಯು ಕುಲಪತಿ ಎಚ್.ಡಿ.ನಾರಾಯಣಸ್ವಾಮಿ,‘ಇತ್ತೀಚೆಗೆ ದಿನಕ್ಕೊಂದು ರೋಗ ಹುಟ್ಟಿಕೊಳ್ಳುತ್ತಿದೆ. ಅವುಗಳನ್ನು ನಿಯಂತ್ರಿಸಲು ಪಶುವೈದ್ಯಕೀಯ ಸಂಸ್ಥೆಗಳು ಸನ್ನದ್ಧವಾಗಿರಬೇಕು. ಇದರಿಂದ ಪಶುವೈದ್ಯಕೀಯ ಸವಾಲಿನ ವೃತ್ತಿಯಾದರೆ, ಪಶುವೈದ್ಯರಿಗೆ ನಿತ್ಯವೂ ಸವಾಲಿನ ದಿನ’ ಎಂದು ಹೇಳಿದರು.</p>.<p>‘ದೇಶದಲ್ಲಿ ರೋಗನಿಯಂತ್ರಣಕ್ಕೆಪಶುವೈದ್ಯಕೀಯ ಕ್ಷೇತ್ರದ ಕೊಡುಗೆ ಅಗಾಧ.ರೋಗಗಳನ್ನು ತಡೆಯಲು ಜಾಗತಿಕವಾಗಿ ಆಧುನಿಕ ಚಿಕಿತ್ಸಾ ವಿಧಾನ ಹಾಗೂ ತಂತ್ರಜ್ಞಾನಗಳು ಬಳಕೆಯಲ್ಲಿವೆ. ಆದರೆ, ಅವುಗಳ ಬಗ್ಗೆ ಇಲ್ಲಿನ ವೈದ್ಯರಿಗೆ ಮಾಹಿತಿ ಕೊರತೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ದೇಶದ ಬಹುತೇಕ ಪಶು ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಆಧುನಿಕ ರೋಗನಿರ್ಣಯ (ಡಯಾಗ್ನೋಸ್ಟಿಕ್) ಕೇಂದ್ರಗಳ ಕೊರತೆ ಇದೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಮನ ಹರಿಸಬೇಕು’ ಎಂದು ಕೇರಳದಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್.ಸಸೀಂದ್ರನಾಥ್ ತಿಳಿಸಿದರು.</p>.<p>ಬೀದರ್ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆವಿಎಎಫ್ಎಸ್ಯು) ಹಾಗೂ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜು ಸಹಯೋಗದಲ್ಲಿಬುಧವಾರ ಆಯೋಜಿಸಿದ್ದಭಾರತೀಯ ಪಶು ಔಷಧ ಸಂಸ್ಥೆಯ ವಾರ್ಷಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಈಚೆಗೆ ಸಂಭವಿಸುತ್ತಿರುವ ಮಾರಕ ಕಾಯಿಲೆಗಳ ಹರಡುವಿಕೆಯಲ್ಲಿಪ್ರಾಣಿಗಳ ಪಾತ್ರವೂ ಇದೆ. ಜಾಗತಿಕ ತಾಪಮಾನ ಹೆಚ್ಚಳದಿಂದ ಹಾಲು, ಮಾಂಸ ಹಾಗೂ ಮೊಟ್ಟೆ ಉತ್ಪಾದನೆಯಲ್ಲಿ ಏರುಪೇರಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಜನಸಂಖ್ಯೆ ಹೆಚ್ಚುತ್ತಿರುವಂತೆ ಪ್ರಾಣಿಗಳ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ. ಜನರ ಆರೋಗ್ಯ ಸುಧಾರಣೆಗೆ ಕೊಡುವ ಆದ್ಯತೆಯನ್ನು ಪ್ರಾಣಿಗಳಿಗೂ ನೀಡಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲ ಪಶುವೈದ್ಯಕೀಯ ಸಂಸ್ಥೆಗಳು ಗಮನಹರಿಸಬೇಕು’ ಎಂದರು.</p>.<p>ಕೆವಿಎಎಫ್ಎಸ್ಯು ಕುಲಪತಿ ಎಚ್.ಡಿ.ನಾರಾಯಣಸ್ವಾಮಿ,‘ಇತ್ತೀಚೆಗೆ ದಿನಕ್ಕೊಂದು ರೋಗ ಹುಟ್ಟಿಕೊಳ್ಳುತ್ತಿದೆ. ಅವುಗಳನ್ನು ನಿಯಂತ್ರಿಸಲು ಪಶುವೈದ್ಯಕೀಯ ಸಂಸ್ಥೆಗಳು ಸನ್ನದ್ಧವಾಗಿರಬೇಕು. ಇದರಿಂದ ಪಶುವೈದ್ಯಕೀಯ ಸವಾಲಿನ ವೃತ್ತಿಯಾದರೆ, ಪಶುವೈದ್ಯರಿಗೆ ನಿತ್ಯವೂ ಸವಾಲಿನ ದಿನ’ ಎಂದು ಹೇಳಿದರು.</p>.<p>‘ದೇಶದಲ್ಲಿ ರೋಗನಿಯಂತ್ರಣಕ್ಕೆಪಶುವೈದ್ಯಕೀಯ ಕ್ಷೇತ್ರದ ಕೊಡುಗೆ ಅಗಾಧ.ರೋಗಗಳನ್ನು ತಡೆಯಲು ಜಾಗತಿಕವಾಗಿ ಆಧುನಿಕ ಚಿಕಿತ್ಸಾ ವಿಧಾನ ಹಾಗೂ ತಂತ್ರಜ್ಞಾನಗಳು ಬಳಕೆಯಲ್ಲಿವೆ. ಆದರೆ, ಅವುಗಳ ಬಗ್ಗೆ ಇಲ್ಲಿನ ವೈದ್ಯರಿಗೆ ಮಾಹಿತಿ ಕೊರತೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>