ಇದಕ್ಕೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಆಕ್ಷೇಪ ವ್ಯಕ್ತಪಡಿಸಿದರು. ‘ಕರ್ನಾಟಕ ಪೌರಾಡಳಿತ ಕಾಯ್ದೆಯ ಕಲಂ 428ರ ಪ್ರಕಾರ ಬೈ–ಲಾ ಅನ್ನು ಅನುಮೋದಿಸಿ ಏಕಕಾಲದಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಅಧಿಸೂಚನೆ ಹೊರಡಿಸಬೇಕು. ಅದಕ್ಕಾಗಿ ಎರಡೂ ಭಾಷೆಯಲ್ಲಿನ ಬೈ–ಲಾ ಪ್ರತಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಬೇಕಿತ್ತು. ಕನ್ನಡದಲ್ಲಿ ಅಧಿಸೂಚನೆ ಹೊರಡಿಸದೇ ಹೋದರೆ ಬೈ–ಲಾ ಅನುಷ್ಠಾನಕ್ಕೆ ಬರುವುದಿಲ್ಲ’ ಎಂದರು.