ನಗರದ ಹೃದಯಭಾಗದಲ್ಲಿರುವ ಮಾವಿನಕೆರೆ ಆಕರ್ಷಣೀಯ ಸ್ಥಳವಾಗಿದ್ದು, ಕೆರೆಯ ಪಕ್ಕದಲ್ಲಿ ಅಭಿವೃದ್ಧಿ ಪಡಿಸಿರುವ ಉದ್ಯಾನದಲ್ಲಿ ನಿತ್ಯವೂ ಸಂಜೆ, ಬೆಳಿಗ್ಗೆ ಜನರು ವಾಯುವಿಹಾರಕ್ಕೆ ಬರುತ್ತಾರೆ. ವಾರಾಂತ್ಯ ಮತ್ತು ರಜೆ ದಿನಗಳಲ್ಲಿ ಜನದಟ್ಟಣೆ ಇರುತ್ತದೆ. ಸಂಜೆ ಹಾಗೂ ನಸುಕಿನಲ್ಲಿ ಕತ್ತಲು ಇರುತ್ತದೆ. ವಿದ್ಯುತ್ ದೀಪ ಇಲ್ಲದ ಕಾರಣ ಜನರು ಭೀತಿಯಲ್ಲಿ ವಾಯುವಿಹಾರ ಮಾಡುವಂತಾಗಿದೆ.