ವಿಮಾನಯಾನ ಸಚಿವ ಸುರೇಶ್ ಪ್ರಭು ಮಾತನಾಡಿ, ’ದೇಶದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಉಡಾನ್ ಯೋಜನೆಯ ಫಲವಾಗಿ ಜನ ಸಾಮಾನ್ಯರೂ ವಿಮಾನದಲ್ಲಿ ಪ್ರಯಾಣಿಸುವಂತಾಗಿದೆ. ₹10 ಸಾವಿರ ಕೋಟಿ ವೆಚ್ಚದಲ್ಲಿ ದೇಶದಲ್ಲಿ ಇನ್ನೂ 100 ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.