<p><strong>ಬೆಂಗಳೂರು:</strong> ‘ಯಲಹಂಕ ವಾಯು ನೆಲೆಯಲ್ಲಿನ 2019ರ ಫೆಬ್ರುವರಿ 23ರಂದು ಅಂತರರಾಷ್ಟ್ರೀಯ ಏರ್ ಶೋ ವೇಳೆ ಕಾರುಗಳ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತ ವಿಚಾರಣೆಗೆ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.</p>.<p>ನಿವೃತ್ತ ವಿಂಗ್ ಕಮಾಂಡರ್ ಜಿ.ವಿ. ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಈ ಅರ್ಜಿಯನ್ನು ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಮಂಗಳವಾರ ವಿಚಾರಣೆ ನಡೆಸಿದರು.</p>.<p>ಪ್ರತಿವಾದಿಗಳಾದ ಎಚ್ಎಎಲ್ ಕಾರ್ಯನಿರ್ವಾಹಕ ನಿರ್ದೇಶಕರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಹಾಗೂ ಅಗ್ನಿ ಶಾಮಕ ಸೇವೆಗಳು ವಿಭಾಗದ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಯಲಹಂಕ ವಾಯು ನೆಲೆಯಲ್ಲಿನ 2019ರ ಫೆಬ್ರುವರಿ 23ರಂದು ಅಂತರರಾಷ್ಟ್ರೀಯ ಏರ್ ಶೋ ವೇಳೆ ಕಾರುಗಳ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತ ವಿಚಾರಣೆಗೆ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.</p>.<p>ನಿವೃತ್ತ ವಿಂಗ್ ಕಮಾಂಡರ್ ಜಿ.ವಿ. ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಈ ಅರ್ಜಿಯನ್ನು ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಮಂಗಳವಾರ ವಿಚಾರಣೆ ನಡೆಸಿದರು.</p>.<p>ಪ್ರತಿವಾದಿಗಳಾದ ಎಚ್ಎಎಲ್ ಕಾರ್ಯನಿರ್ವಾಹಕ ನಿರ್ದೇಶಕರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಹಾಗೂ ಅಗ್ನಿ ಶಾಮಕ ಸೇವೆಗಳು ವಿಭಾಗದ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>