‘ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಪಕ್ಕದಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಏರೊಸ್ಪೇಸ್ ಪಾರ್ಕ್ ನಿರ್ಮಿಸಲು ಸರ್ಕಾರ 2008ರಲ್ಲೇ ನಿರ್ಧಾರ ಕೈಗೊಂಡಿತ್ತು. ಕೆಐಎಎಲ್ ಪಕ್ಕದಲ್ಲಿ ರಾಜ್ಯ ಸರ್ಕಾರವು ವಿಮಾನ ನಿರ್ವಹಣಾ ಸೌಲಭ್ಯವನ್ನು ಹೊಂದಿದೆ. ಹಾಸನ ಮತ್ತು ಬೆಂಗಳೂರಿನಲ್ಲಿ ವಿಮಾನಗಳ ನಿರ್ವಹಣೆ, ದುರಸ್ತಿ ಹಾಗೂ ಕಾರ್ಯಾಚರಣಾ ಕೇಂದ್ರಗಳನ್ನು (ಎಂಆರ್ಒ) ಸ್ಥಾಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ’ ಎಂದು ಅವರು ತಿಳಿಸಿದರು.