<p><strong>ಬೆಂಗಳೂರು</strong>: ನಟ ಪುನೀತ್ ರಾಜ್ಕುಮಾರ್ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅಭಿಮಾನಗಳು, ಸೂಕ್ತ ತನಿಖೆ ನಡೆಸುವಂತೆ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ, ಪುನೀತ್ ಅವರ ಕುಟುಂಬದ ವೈದ್ಯ ಡಾ. ರಮಣ್ರಾವ್ ಮನೆ ಹಾಗೂ ಕ್ಲಿನಿಕ್ಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.</p>.<p>‘ಪುನೀತ್ ಅಭಿಮಾನಿ ಎಂದು ಹೇಳಿಕೊಂಡ ಅರುಣ್ ಪರಮೇಶ್ವರ್ ಎಂಬುವರು ಗುರುವಾರ ದೂರು ನೀಡಿದ್ದಾರೆ. ಪುನೀತ್ರಿಗೆ ಅವರ ಕುಟುಂಬದ ವೈದ್ಯ ಡಾ. ರಮಣ್ರಾವ್ ಆರಂಭದಲ್ಲಿ ಯಾವ ರೀತಿ ಚಿಕಿತ್ಸೆ ನೀಡಿದ್ದರು ? ವಿಕ್ರಮ್ ಆಸ್ಪತ್ರೆಗೆ ಕರೆದೊಯ್ಯುವಂತೆ ತಡವಾಗಿ ಹೇಳಿದ್ದೇಕೆ ? ಪುನೀತ್ ಅವರಿಗೆ ನಿಜವಾಗಿಯೂ ಏನಾಗಿತ್ತು ? ಎಂಬುದಾಗಿ ದೂರಿನಲ್ಲಿ ಪ್ರಶ್ನಿಸಿದ್ದಾರೆ. ದೂರು ಸ್ವೀಕರಿಸಲಾಗಿದ್ದು, ಹಿರಿಯ ಅಧಿಕಾರಿಗಳ ಸಲಹೆಯಂತೆ ಮುಂದುವರಿಯಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಇನ್ನೊಬ್ಬ ಅಭಿಮಾನಿ ಶನಿವಾರ ಎರಡನೇ ದೂರು ನೀಡಿದ್ದಾರೆ. ವೈದ್ಯ ರಮಣ್ ರಾವ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅವರ ದೂರನ್ನೂ ಪರಿಶೀಲಿಸಲಾಗುತ್ತಿದೆ’ ಎಂದೂ ತಿಳಿಸಿದರು.</p>.<p>‘ವೈದ್ಯರ ಮನೆ ಹಾಗೂ ಕ್ಲಿನಿಕ್ ಎದುರು ಪ್ರತಿಭಟನೆ ನಡೆಸಲು ಕೆಲವರು ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು, ಎರಡೂ ಕಡೆ ಭದ್ರತೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದೂ ಹೇಳಿದರು.</p>.<p>ತಮ್ಮ ವಿರುದ್ಧದ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಡಾ. ರಮಣ್ರಾವ್, ‘ಪುನೀತ್ ರಾಜ್ಕುಮಾರ್ ಆಸ್ಪತ್ರೆಗೆ ಬಂದಾಗ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಅನುಮಾನ ಬೇಡವೆಂದು ಇಸಿಜಿ ಮಾಡಲಾಗಿತ್ತು. ಲಘು ಹೃದಯಘಾತವಾಗಿರಬಹುದೆಂಬ ಅನುಮಾನ ಬಂದಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಮ್ ಆಸ್ಪತ್ರೆಗೆ ಕಳುಹಿಸಲಾಯಿತು’ ಎಂದಿದ್ದಾರೆ.</p>.<p>‘35 ವರ್ಷಗಳಿಂದ ಡಾ. ರಾಜ್ಕುಮಾರ್ ಕುಟುಂಬದವರಿಗೆ ಚಿಕಿತ್ಸೆ ನೀಡುತ್ತಿದ್ದೇನೆ. ಪುನೀತ್ ನನ್ನ ಮಗನಿದ್ದಂತೆ. ನನ್ನಿಂದ ಯಾವುದೇ ಲೋಪ ಆಗಿಲ್ಲ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಟ ಪುನೀತ್ ರಾಜ್ಕುಮಾರ್ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅಭಿಮಾನಗಳು, ಸೂಕ್ತ ತನಿಖೆ ನಡೆಸುವಂತೆ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ, ಪುನೀತ್ ಅವರ ಕುಟುಂಬದ ವೈದ್ಯ ಡಾ. ರಮಣ್ರಾವ್ ಮನೆ ಹಾಗೂ ಕ್ಲಿನಿಕ್ಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.</p>.<p>‘ಪುನೀತ್ ಅಭಿಮಾನಿ ಎಂದು ಹೇಳಿಕೊಂಡ ಅರುಣ್ ಪರಮೇಶ್ವರ್ ಎಂಬುವರು ಗುರುವಾರ ದೂರು ನೀಡಿದ್ದಾರೆ. ಪುನೀತ್ರಿಗೆ ಅವರ ಕುಟುಂಬದ ವೈದ್ಯ ಡಾ. ರಮಣ್ರಾವ್ ಆರಂಭದಲ್ಲಿ ಯಾವ ರೀತಿ ಚಿಕಿತ್ಸೆ ನೀಡಿದ್ದರು ? ವಿಕ್ರಮ್ ಆಸ್ಪತ್ರೆಗೆ ಕರೆದೊಯ್ಯುವಂತೆ ತಡವಾಗಿ ಹೇಳಿದ್ದೇಕೆ ? ಪುನೀತ್ ಅವರಿಗೆ ನಿಜವಾಗಿಯೂ ಏನಾಗಿತ್ತು ? ಎಂಬುದಾಗಿ ದೂರಿನಲ್ಲಿ ಪ್ರಶ್ನಿಸಿದ್ದಾರೆ. ದೂರು ಸ್ವೀಕರಿಸಲಾಗಿದ್ದು, ಹಿರಿಯ ಅಧಿಕಾರಿಗಳ ಸಲಹೆಯಂತೆ ಮುಂದುವರಿಯಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಇನ್ನೊಬ್ಬ ಅಭಿಮಾನಿ ಶನಿವಾರ ಎರಡನೇ ದೂರು ನೀಡಿದ್ದಾರೆ. ವೈದ್ಯ ರಮಣ್ ರಾವ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅವರ ದೂರನ್ನೂ ಪರಿಶೀಲಿಸಲಾಗುತ್ತಿದೆ’ ಎಂದೂ ತಿಳಿಸಿದರು.</p>.<p>‘ವೈದ್ಯರ ಮನೆ ಹಾಗೂ ಕ್ಲಿನಿಕ್ ಎದುರು ಪ್ರತಿಭಟನೆ ನಡೆಸಲು ಕೆಲವರು ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು, ಎರಡೂ ಕಡೆ ಭದ್ರತೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದೂ ಹೇಳಿದರು.</p>.<p>ತಮ್ಮ ವಿರುದ್ಧದ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಡಾ. ರಮಣ್ರಾವ್, ‘ಪುನೀತ್ ರಾಜ್ಕುಮಾರ್ ಆಸ್ಪತ್ರೆಗೆ ಬಂದಾಗ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಅನುಮಾನ ಬೇಡವೆಂದು ಇಸಿಜಿ ಮಾಡಲಾಗಿತ್ತು. ಲಘು ಹೃದಯಘಾತವಾಗಿರಬಹುದೆಂಬ ಅನುಮಾನ ಬಂದಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಮ್ ಆಸ್ಪತ್ರೆಗೆ ಕಳುಹಿಸಲಾಯಿತು’ ಎಂದಿದ್ದಾರೆ.</p>.<p>‘35 ವರ್ಷಗಳಿಂದ ಡಾ. ರಾಜ್ಕುಮಾರ್ ಕುಟುಂಬದವರಿಗೆ ಚಿಕಿತ್ಸೆ ನೀಡುತ್ತಿದ್ದೇನೆ. ಪುನೀತ್ ನನ್ನ ಮಗನಿದ್ದಂತೆ. ನನ್ನಿಂದ ಯಾವುದೇ ಲೋಪ ಆಗಿಲ್ಲ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>