‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಸೆ. 4ರಂದು ಬೇರೆ ಊರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಾತ್ರಿಪಡಿಸಿಕೊಂಡು ಆರೋಪಿ ಕೃತ್ಯಕ್ಕೆ ಸಂಚು ರೂಪಿಸಿದ್ದ. ಮನೆಯ ಬೀಗ ಮುರಿದು ಒಳನುಗ್ಗಿದ್ದ ಆತ, ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕದ್ದುಕೊಂಡು ಪರಾರಿಯಾಗಿದ್ದ. ಸೆ.6ರಂದು ದೂರುದಾರರು ತಮ್ಮ ಮನೆಗೆ ವಾಪಸು ಬಂದಾಗ ಕಳ್ಳತನ ಸಂಗತಿ ಗೊತ್ತಾಗಿತ್ತು’ ಎಂದೂ ತಿಳಿಸಿವೆ.