ಬಿಬಿಎಂಪಿ ವಿಶೇಷ ಆಯುಕ್ತ (ಕಸ ವಿಲೇವಾರಿ) ಡಿ. ರಂದೀಪ್, ‘ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ವಿಶೇಷ ಮಹತ್ವ ಇದೆ. ನಗರದಲ್ಲಿ ಇದುವರೆಗೆ ನಾಗರಿಕರಿಂದ 97 ಸಾವಿರ ಪ್ರತಿಕ್ರಿಯೆಗಳು ಬಂದಿದ್ದು, ಮಾರ್ಚ್ ಅಂತ್ಯದಲ್ಲಿ ಇದು 1.5 ಲಕ್ಷ ತಲುಪುವ ನಿರೀಕ್ಷೆ ಇದೆ’ ಎಂದರು.