ಬೆಂಗಳೂರು: ಯಶವಂತಪುರ ಎಪಿಎಂಸಿ ಪ್ರಾಂಗಣದಲ್ಲಿ ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ, ಶುಂಠಿ ವ್ಯಾಪಾರ ಪುನರಾರಂಭಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಾತ್ಕಾಲಿಕ ಅನುಮತಿ ನೀಡಿದೆ. ಪರವಾನಗಿ ಹಾಗೂ ಮಳಿಗೆ ಹೊಂದಿರುವ ವರ್ತಕರು ಜೂ.30ರವರೆಗೆ ವಾರದಲ್ಲಿ 3 ದಿನಗಳು ಮಾತ್ರ ವಹಿವಾಟು ನಡೆಸುವಂತೆ ಸೂಚಿಸಿದೆ.