ಕೋಲಾರ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ’ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು ಮತ್ತು ರೈತರು ಮಾಡಿರುವ ಹೊಸ ಸಂಶೋಧನೆಗಳನ್ನು ಕಷ್ಟಪಟ್ಟು ವ್ಯವಸಾಯ ಮಾಡುತ್ತಿರುವ ಅವಿ ದ್ಯಾವಂತ ರೈತರಿಗೂ ತಲುಪಿಸಬೇಕು. ಆ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಿ, ಅವರ ಜೀವನಮಟ್ಟ ಸುಧಾರಣೆಯಾಗಲು ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು’ ಎಂದು ತಿಳಿಸಿದರು.