<p><strong>ಬೆಂಗಳೂರು</strong>: ‘ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ತಂತ್ರಜ್ಞಾನ ಕಾಲಿಟ್ಟಿದೆ. ಆದ್ದರಿಂದ ರೈತರು ಕೂಡ ಆಧುನಿಕತೆಗೆ ತೆರೆದುಕೊಳ್ಳಬೇಕು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. </p>.<p>ಡಾ.ಎ.ಬಿ. ಪಾಟೀಲರ ಅಭಿನಂದನಾ ಸಮಿತಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಕೃಷಿ ತಜ್ಞ ಎ.ಬಿ. ಪಾಟೀಲರ ಅಭಿನಂದನಾ ಗ್ರಂಥ ‘ಅಶೋಕವೃಕ್ಷ’ವನ್ನು ಜನಾರ್ಪಣೆ ಮಾಡಿ, ಮಾತನಾಡಿದರು. </p>.<p>‘ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರ ತನ್ನದೆಯಾದ ಕೊಡುಗೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕೊಡುಗೆ ನೀಡಬೇಕಿದೆ. ಕೃಷಿ ಕ್ಷೇತ್ರವನ್ನು ಎಷ್ಟು ಅರಿತುಕೊಂಡರೂ ಸಾಲದು. ಈ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಬದಲಾವಣೆ ಆಗಬೇಕಿದೆ. ರೈತರು ಬದಲಾವಣೆಗೆ ಒಗ್ಗಿಕೊಂಡು ಕೃಷಿ ಕ್ಷೇತ್ರದ ಏಳ್ಗೆಗೆ ಶ್ರಮಿಸಬೇಕು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಾಡಿನ ಕೃಷಿ ತಂತ್ರಜ್ಞರೂ ಕೊಡುಗೆ ನೀಡುತ್ತಿದ್ದಾರೆ. ಅಂತಹವರ ಸಾಲಿನಲ್ಲಿ ಕೃಷಿ ತಜ್ಞ ಎ.ಬಿ.ಪಾಟೀಲ ಅವರು ಸೇರುತ್ತಾರೆ’ ಎಂದು ಶ್ಲಾಘಿಸಿದರು. </p>.<p>ಪುಸ್ತಕದ ಬಗ್ಗೆ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ‘ಎ.ಬಿ. ಪಾಟೀಲ ಅವರು ಕೃಷಿ ಪದವಿ ಪಡೆಯಲು ಅನುಭವಿಸಿದ ಸಂಕಷ್ಟದಿಂದ ಹಿಡಿದು, ಆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಕೃತಿಯಲ್ಲಿ ಕಟ್ಟಿಕೊಡಲಾಗಿದೆ. ಇಂತಹ ಕೃಷಿ ಸಾಧಕರ ಪುಸ್ತಕವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೇಸಾಯದ ಬದುಕು ಶೀರ್ಷಿಕೆಯಡಿ ಹೊರತರಲು ಯೋಜನೆ ರೂಪಿಸಿದೆ’ ಎಂದು ಹೇಳಿದರು.</p>.<p>ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ತಂತ್ರಜ್ಞಾನ ಕಾಲಿಟ್ಟಿದೆ. ಆದ್ದರಿಂದ ರೈತರು ಕೂಡ ಆಧುನಿಕತೆಗೆ ತೆರೆದುಕೊಳ್ಳಬೇಕು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. </p>.<p>ಡಾ.ಎ.ಬಿ. ಪಾಟೀಲರ ಅಭಿನಂದನಾ ಸಮಿತಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಕೃಷಿ ತಜ್ಞ ಎ.ಬಿ. ಪಾಟೀಲರ ಅಭಿನಂದನಾ ಗ್ರಂಥ ‘ಅಶೋಕವೃಕ್ಷ’ವನ್ನು ಜನಾರ್ಪಣೆ ಮಾಡಿ, ಮಾತನಾಡಿದರು. </p>.<p>‘ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರ ತನ್ನದೆಯಾದ ಕೊಡುಗೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕೊಡುಗೆ ನೀಡಬೇಕಿದೆ. ಕೃಷಿ ಕ್ಷೇತ್ರವನ್ನು ಎಷ್ಟು ಅರಿತುಕೊಂಡರೂ ಸಾಲದು. ಈ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಬದಲಾವಣೆ ಆಗಬೇಕಿದೆ. ರೈತರು ಬದಲಾವಣೆಗೆ ಒಗ್ಗಿಕೊಂಡು ಕೃಷಿ ಕ್ಷೇತ್ರದ ಏಳ್ಗೆಗೆ ಶ್ರಮಿಸಬೇಕು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಾಡಿನ ಕೃಷಿ ತಂತ್ರಜ್ಞರೂ ಕೊಡುಗೆ ನೀಡುತ್ತಿದ್ದಾರೆ. ಅಂತಹವರ ಸಾಲಿನಲ್ಲಿ ಕೃಷಿ ತಜ್ಞ ಎ.ಬಿ.ಪಾಟೀಲ ಅವರು ಸೇರುತ್ತಾರೆ’ ಎಂದು ಶ್ಲಾಘಿಸಿದರು. </p>.<p>ಪುಸ್ತಕದ ಬಗ್ಗೆ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ‘ಎ.ಬಿ. ಪಾಟೀಲ ಅವರು ಕೃಷಿ ಪದವಿ ಪಡೆಯಲು ಅನುಭವಿಸಿದ ಸಂಕಷ್ಟದಿಂದ ಹಿಡಿದು, ಆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಕೃತಿಯಲ್ಲಿ ಕಟ್ಟಿಕೊಡಲಾಗಿದೆ. ಇಂತಹ ಕೃಷಿ ಸಾಧಕರ ಪುಸ್ತಕವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೇಸಾಯದ ಬದುಕು ಶೀರ್ಷಿಕೆಯಡಿ ಹೊರತರಲು ಯೋಜನೆ ರೂಪಿಸಿದೆ’ ಎಂದು ಹೇಳಿದರು.</p>.<p>ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>