<p><strong>ಬೆಂಗಳೂರು</strong>: ‘ಅಗ್ರಿಗೋಲ್ಡ್ ಕಂಪನಿಯಿಂದ ವಂಚನೆಗೀಡಾದವರಿಗೆ ಹಣ ನೀಡಲು ಆಂಧ್ರಪ್ರದೇಶ ಸರ್ಕಾರ ತೀರ್ಮಾನಿಸಿದ್ದು, ಅದೇ ಮಾದರಿಯಲ್ಲೇ ಕರ್ನಾಟಕ ಸರ್ಕಾರವೂ ಹಣ ನೀಡಬೇಕು’ ಎಂದು ಒತ್ತಾಯಿಸಿ ಬೃಹತ್ ಸಮಾವೇಶ ನಡೆಸಲು ರಾಜ್ಯದಲ್ಲಿರುವ ಕಂಪನಿಯ ಏಜೆಂಟರು ಹಾಗೂ ಸಂತ್ರಸ್ತರು ತೀರ್ಮಾನಿಸಿದ್ದಾರೆ.</p>.<p>‘ಬಿಡದಿ ಬಳಿಯ ಬೈರಮಂಗಲದಲ್ಲಿರುವ ಅಗ್ರಿಗೋಲ್ಡ್ ಕಂಪನಿಯ ಜಮೀನಿನಲ್ಲೇ ನ. 17ರಂದು ಸಮಾವೇಶ ನಡೆಸಲಾಗುವುದು. ಈ ಸಂಬಂಧ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ’ ಎಂದು ಸಂತ್ರಸ್ತರೊಬ್ಬರು ತಿಳಿಸಿದ್ದಾರೆ.</p>.<p>‘ವಂಚನೆ ಪ್ರಕರಣ ಸಂಬಂಧ ಆಂಧ್ರಪ್ರದೇಶದ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಂಪನಿಗೆ ₹ 10,000 ಕಟ್ಟಿದ್ದರೂ ಅವರಿಗೆಲ್ಲ ಹಣ ನೀಡಲು ಆಂಧ್ರಪ್ರದೇಶ ಸರ್ಕಾರವೇ ತೀರ್ಮಾನಿಸಿದೆ. ಕೆಲ ದಿನಗಳ ಬಳಿಕ ₹20,000 ಪಾವತಿಸಿದವರಿಗೂ ಹಣ ನೀಡುವ ಭರವಸೆಯನ್ನೂ ನೀಡಿದೆ. ಇದಕ್ಕೆ ಅಲ್ಲಿಯ ಸಂತ್ರಸ್ತರ ಹೋರಾಟವೇ ಕಾರಣ. ನಮ್ಮಲ್ಲಿಯೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಸಮಾವೇಶದ ಮೂಲಕ ಹೋರಾಟ ಆರಂಭಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಕಂಪನಿ ವಿರುದ್ಧ ಆಂಧ್ರಪ್ರದೇಶದ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದ ಅಂಡಾಳು ರಮೇಶ್ ಬಾಬು ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದಲೂ 5 ಸಾವಿರಕ್ಕೂ ಹೆಚ್ಚು ಏಜೆಂಟರು ಹಾಗೂ ಸಂತ್ರಸ್ತರು ಸಮಾವೇಶಕ್ಕೆ ಬರಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಗ್ರಿಗೋಲ್ಡ್ ಕಂಪನಿಯಿಂದ ವಂಚನೆಗೀಡಾದವರಿಗೆ ಹಣ ನೀಡಲು ಆಂಧ್ರಪ್ರದೇಶ ಸರ್ಕಾರ ತೀರ್ಮಾನಿಸಿದ್ದು, ಅದೇ ಮಾದರಿಯಲ್ಲೇ ಕರ್ನಾಟಕ ಸರ್ಕಾರವೂ ಹಣ ನೀಡಬೇಕು’ ಎಂದು ಒತ್ತಾಯಿಸಿ ಬೃಹತ್ ಸಮಾವೇಶ ನಡೆಸಲು ರಾಜ್ಯದಲ್ಲಿರುವ ಕಂಪನಿಯ ಏಜೆಂಟರು ಹಾಗೂ ಸಂತ್ರಸ್ತರು ತೀರ್ಮಾನಿಸಿದ್ದಾರೆ.</p>.<p>‘ಬಿಡದಿ ಬಳಿಯ ಬೈರಮಂಗಲದಲ್ಲಿರುವ ಅಗ್ರಿಗೋಲ್ಡ್ ಕಂಪನಿಯ ಜಮೀನಿನಲ್ಲೇ ನ. 17ರಂದು ಸಮಾವೇಶ ನಡೆಸಲಾಗುವುದು. ಈ ಸಂಬಂಧ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ’ ಎಂದು ಸಂತ್ರಸ್ತರೊಬ್ಬರು ತಿಳಿಸಿದ್ದಾರೆ.</p>.<p>‘ವಂಚನೆ ಪ್ರಕರಣ ಸಂಬಂಧ ಆಂಧ್ರಪ್ರದೇಶದ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಂಪನಿಗೆ ₹ 10,000 ಕಟ್ಟಿದ್ದರೂ ಅವರಿಗೆಲ್ಲ ಹಣ ನೀಡಲು ಆಂಧ್ರಪ್ರದೇಶ ಸರ್ಕಾರವೇ ತೀರ್ಮಾನಿಸಿದೆ. ಕೆಲ ದಿನಗಳ ಬಳಿಕ ₹20,000 ಪಾವತಿಸಿದವರಿಗೂ ಹಣ ನೀಡುವ ಭರವಸೆಯನ್ನೂ ನೀಡಿದೆ. ಇದಕ್ಕೆ ಅಲ್ಲಿಯ ಸಂತ್ರಸ್ತರ ಹೋರಾಟವೇ ಕಾರಣ. ನಮ್ಮಲ್ಲಿಯೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಸಮಾವೇಶದ ಮೂಲಕ ಹೋರಾಟ ಆರಂಭಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಕಂಪನಿ ವಿರುದ್ಧ ಆಂಧ್ರಪ್ರದೇಶದ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದ ಅಂಡಾಳು ರಮೇಶ್ ಬಾಬು ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದಲೂ 5 ಸಾವಿರಕ್ಕೂ ಹೆಚ್ಚು ಏಜೆಂಟರು ಹಾಗೂ ಸಂತ್ರಸ್ತರು ಸಮಾವೇಶಕ್ಕೆ ಬರಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>