<p><strong>ಬೆಂಗಳೂರು</strong>: ಹವಾಮಾನ ಬದಲಾವಣೆ, ಕೀಟ–ರೋಗಗಳ ನಿರ್ವಹಣೆ, ಜಲ ಸಂಪನ್ಮೂಲಗಳ ಕಡಿಮೆ ಲಭ್ಯತೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದರು. </p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ ಸೋಮವಾರ ಆಯೋಜಿಸಿದ್ದ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಕೃಷಿ ವಿಜ್ಞಾನಿಗಳಿಗೆ ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ, ಎಐ ತಂತ್ರಜ್ಞಾನ ಆಧಾರಿತ ಬೆಳೆ ವಿಶ್ಲೇಷಣೆ ನಡೆಸುವ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು. </p>.<p>‘ನಮ್ಮ ಕೆವಿಕೆ ವಿಜ್ಞಾನಿಗಳು ಗ್ರಾಮೀಣ ಭಾಗದ ರೈತರು ಹಾಗೂ ವಿಶ್ವವಿದ್ಯಾಲಯಗಳ ನಡುವೆ ಜ್ಞಾನದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿ ವೈಜ್ಞಾನಿಕ ಸಲಹೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಜ್ಞಾನಿಗಳಿಗೆ ಹೊಸ–ಹೊಸ ತಂತ್ರಜ್ಞಾನದ ತರಬೇತಿಗಳನ್ನು ನೀಡಲಾಗುತ್ತಿದೆ’ ಎಂದರು. </p>.<p>‘ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಮಾತನಾಡಿ, ‘ಹೊಸ ತಂತ್ರಜ್ಞಾನಗಳು ರೈತರ ಬದುಕಿಗೆ ಹೊಸ ಭರವಸೆ ನೀಡುತ್ತವೆ. ರೈತರಿಗೆ ತಲಪುವ ಪ್ರತಿಯೊಂದು ಸಲಹೆಯೂ ಹೆಚ್ಚು ನಿಖರ, ವೈಜ್ಞಾನಿಕ ಮತ್ತು ಫಲಪ್ರದವಾಗಬೇಕು’ ಎಂದು ಹೇಳಿದರು. </p>.<p>ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕಿ ಸುಮಾ ಉಪಸ್ಥಿತರಿದ್ದರು. </p>
<p><strong>ಬೆಂಗಳೂರು</strong>: ಹವಾಮಾನ ಬದಲಾವಣೆ, ಕೀಟ–ರೋಗಗಳ ನಿರ್ವಹಣೆ, ಜಲ ಸಂಪನ್ಮೂಲಗಳ ಕಡಿಮೆ ಲಭ್ಯತೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದರು. </p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ ಸೋಮವಾರ ಆಯೋಜಿಸಿದ್ದ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಕೃಷಿ ವಿಜ್ಞಾನಿಗಳಿಗೆ ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ, ಎಐ ತಂತ್ರಜ್ಞಾನ ಆಧಾರಿತ ಬೆಳೆ ವಿಶ್ಲೇಷಣೆ ನಡೆಸುವ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು. </p>.<p>‘ನಮ್ಮ ಕೆವಿಕೆ ವಿಜ್ಞಾನಿಗಳು ಗ್ರಾಮೀಣ ಭಾಗದ ರೈತರು ಹಾಗೂ ವಿಶ್ವವಿದ್ಯಾಲಯಗಳ ನಡುವೆ ಜ್ಞಾನದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿ ವೈಜ್ಞಾನಿಕ ಸಲಹೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಜ್ಞಾನಿಗಳಿಗೆ ಹೊಸ–ಹೊಸ ತಂತ್ರಜ್ಞಾನದ ತರಬೇತಿಗಳನ್ನು ನೀಡಲಾಗುತ್ತಿದೆ’ ಎಂದರು. </p>.<p>‘ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಮಾತನಾಡಿ, ‘ಹೊಸ ತಂತ್ರಜ್ಞಾನಗಳು ರೈತರ ಬದುಕಿಗೆ ಹೊಸ ಭರವಸೆ ನೀಡುತ್ತವೆ. ರೈತರಿಗೆ ತಲಪುವ ಪ್ರತಿಯೊಂದು ಸಲಹೆಯೂ ಹೆಚ್ಚು ನಿಖರ, ವೈಜ್ಞಾನಿಕ ಮತ್ತು ಫಲಪ್ರದವಾಗಬೇಕು’ ಎಂದು ಹೇಳಿದರು. </p>.<p>ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕಿ ಸುಮಾ ಉಪಸ್ಥಿತರಿದ್ದರು. </p>