<p><strong>ಬೆಂಗಳೂರು</strong>: ಹವಾಮಾನ ಬದಲಾವಣೆ, ಕೀಟ–ರೋಗಗಳ ನಿರ್ವಹಣೆ, ಜಲ ಸಂಪನ್ಮೂಲಗಳ ಕಡಿಮೆ ಲಭ್ಯತೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದರು. </p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ ಸೋಮವಾರ ಆಯೋಜಿಸಿದ್ದ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಕೃಷಿ ವಿಜ್ಞಾನಿಗಳಿಗೆ ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ, ಎಐ ತಂತ್ರಜ್ಞಾನ ಆಧಾರಿತ ಬೆಳೆ ವಿಶ್ಲೇಷಣೆ ನಡೆಸುವ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು. </p>.<p>‘ನಮ್ಮ ಕೆವಿಕೆ ವಿಜ್ಞಾನಿಗಳು ಗ್ರಾಮೀಣ ಭಾಗದ ರೈತರು ಹಾಗೂ ವಿಶ್ವವಿದ್ಯಾಲಯಗಳ ನಡುವೆ ಜ್ಞಾನದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿ ವೈಜ್ಞಾನಿಕ ಸಲಹೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಜ್ಞಾನಿಗಳಿಗೆ ಹೊಸ–ಹೊಸ ತಂತ್ರಜ್ಞಾನದ ತರಬೇತಿಗಳನ್ನು ನೀಡಲಾಗುತ್ತಿದೆ’ ಎಂದರು. </p>.<p>‘ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಮಾತನಾಡಿ, ‘ಹೊಸ ತಂತ್ರಜ್ಞಾನಗಳು ರೈತರ ಬದುಕಿಗೆ ಹೊಸ ಭರವಸೆ ನೀಡುತ್ತವೆ. ರೈತರಿಗೆ ತಲಪುವ ಪ್ರತಿಯೊಂದು ಸಲಹೆಯೂ ಹೆಚ್ಚು ನಿಖರ, ವೈಜ್ಞಾನಿಕ ಮತ್ತು ಫಲಪ್ರದವಾಗಬೇಕು’ ಎಂದು ಹೇಳಿದರು. </p>.<p>ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕಿ ಸುಮಾ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹವಾಮಾನ ಬದಲಾವಣೆ, ಕೀಟ–ರೋಗಗಳ ನಿರ್ವಹಣೆ, ಜಲ ಸಂಪನ್ಮೂಲಗಳ ಕಡಿಮೆ ಲಭ್ಯತೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದರು. </p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ ಸೋಮವಾರ ಆಯೋಜಿಸಿದ್ದ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಕೃಷಿ ವಿಜ್ಞಾನಿಗಳಿಗೆ ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ, ಎಐ ತಂತ್ರಜ್ಞಾನ ಆಧಾರಿತ ಬೆಳೆ ವಿಶ್ಲೇಷಣೆ ನಡೆಸುವ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು. </p>.<p>‘ನಮ್ಮ ಕೆವಿಕೆ ವಿಜ್ಞಾನಿಗಳು ಗ್ರಾಮೀಣ ಭಾಗದ ರೈತರು ಹಾಗೂ ವಿಶ್ವವಿದ್ಯಾಲಯಗಳ ನಡುವೆ ಜ್ಞಾನದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿ ವೈಜ್ಞಾನಿಕ ಸಲಹೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಜ್ಞಾನಿಗಳಿಗೆ ಹೊಸ–ಹೊಸ ತಂತ್ರಜ್ಞಾನದ ತರಬೇತಿಗಳನ್ನು ನೀಡಲಾಗುತ್ತಿದೆ’ ಎಂದರು. </p>.<p>‘ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಮಾತನಾಡಿ, ‘ಹೊಸ ತಂತ್ರಜ್ಞಾನಗಳು ರೈತರ ಬದುಕಿಗೆ ಹೊಸ ಭರವಸೆ ನೀಡುತ್ತವೆ. ರೈತರಿಗೆ ತಲಪುವ ಪ್ರತಿಯೊಂದು ಸಲಹೆಯೂ ಹೆಚ್ಚು ನಿಖರ, ವೈಜ್ಞಾನಿಕ ಮತ್ತು ಫಲಪ್ರದವಾಗಬೇಕು’ ಎಂದು ಹೇಳಿದರು. </p>.<p>ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕಿ ಸುಮಾ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>