<p><strong>ಬೆಂಗಳೂರು:</strong> ಕೃತಕ ಬುದ್ಧಿಮತ್ತೆ ಆಧರಿಸಿದ ಉತ್ಪನ್ನಗಳು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ಶೋಧನೆಗಳು ಶೃಂಗಸಭೆಯ ವಸ್ತು ಪ್ರದರ್ಶನದಲ್ಲಿ ಒಂದೇ ಸೂರಿನಡಿ ಲಭ್ಯ ಇವೆ.</p>.<p>ಟೆಕ್ ಶೃಂಗದ ವಸ್ತುಪ್ರದರ್ಶನದಲ್ಲಿ ಮೂರು ಸಭಾಂಗಣದಲ್ಲಿ ಸಾವಿರಕ್ಕೂ ಅಧಿಕ ಮಳಿಗೆಗಳನ್ನು ತೆರೆಯಲಾಗಿದೆ. ನವೋದ್ಯಮಗಳು, ಕೈಗಾರಿಕೆ, ಹೊಸ ಉತ್ಪನ್ನಗಳು, ಎಲೆಕ್ಟ್ರಾನಿಕ್ಸ್, ಅಂತರರಾಷ್ಟ್ರೀಯ ಉಪಕರಣಗಳ ಪ್ರದರ್ಶನ ಮಳಿಗೆಗೆ ಗಣ್ಯರು, ವಿದ್ಯಾರ್ಥಿಗಳು, ಯುವಜನರು, ಆಸಕ್ತರು, ಉದ್ಯಮಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. <br><br>ಕೇಂದ್ರದ ಆವರಣದಲ್ಲಿ ತಂತ್ರಜ್ಞಾನ ಆಧಾರಿತ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.</p>.<p>ಭಾರತ, ಅಮೆರಿಕ, ಜಪಾನ್, ಇಸ್ರೇಲ್ ಸೇರಿದಂತೆ ಹಲವು ದೇಶಗಳ ತಂತ್ರಜ್ಞಾನ ಕಂಪನಿಗಳು ತಮ್ಮ ತಂತ್ರಜ್ಞಾನದ ಮಾದರಿಗಳನ್ನು ಪ್ರದರ್ಶಿಸುತ್ತಿವೆ. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು ಕೇಳಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕುತೂಹಲ ತಣಿಸಿಕೊಂಡರು. </p>.<p>ಟೆಕ್ ಶೃಂಗ ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಹೊಸ ಆವಿಷ್ಕಾರಗಳ ಕುರಿತು ಮಾಹಿತಿ ಪಡೆದುಕೊಂಡರು. </p>.<p>ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ), ಇನ್ವೆಸ್ಟ್ ಕರ್ನಾಟಕ ಫೋರಂ ಮಳಿಗೆಗಳಿಗೆ ಸಚಿವ ಎಂ. ಬಿ. ಪಾಟೀಲ ಭೇಟಿ ನೀಡಿ ವೀಕ್ಷಿಸಿದರು. ಭಾರತೀಯ ದೂರವಾಣಿ ಕಾರ್ಖಾನೆ (ಐಟಿಐ), ಎಸ್ಬಿಐ ಮುಂತಾದ ಮಳಿಗೆಗಳಿಗೂ ಭೇಟಿ ನೀಡಿ, ಅಲ್ಲಿಯ ವೈಶಿಷ್ಟ್ಯಗಳ ಬಗ್ಗೆ ತಿಳಿದುಕೊಂಡರು.</p>.<p>ಐಟಿಐ ಅಭಿವೃದ್ಧಿಪಡಿಸಿರುವ ಉತ್ಕೃಷ್ಟ ಗುಣಮಟ್ಟದ ವೈರ್ ಲೆಸ್ ಸೆಟ್ ನೋಡಿ ಅವುಗಳ ಮೂಲಕ ಸಂವಹನ ಕೂಡ ನಡೆಸಿದರು. ಹಾಗೆಯೇ ಐಟಿಐ ತಯಾರಿಸಿರುವ ಡ್ರೋನ್ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃತಕ ಬುದ್ಧಿಮತ್ತೆ ಆಧರಿಸಿದ ಉತ್ಪನ್ನಗಳು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ಶೋಧನೆಗಳು ಶೃಂಗಸಭೆಯ ವಸ್ತು ಪ್ರದರ್ಶನದಲ್ಲಿ ಒಂದೇ ಸೂರಿನಡಿ ಲಭ್ಯ ಇವೆ.</p>.<p>ಟೆಕ್ ಶೃಂಗದ ವಸ್ತುಪ್ರದರ್ಶನದಲ್ಲಿ ಮೂರು ಸಭಾಂಗಣದಲ್ಲಿ ಸಾವಿರಕ್ಕೂ ಅಧಿಕ ಮಳಿಗೆಗಳನ್ನು ತೆರೆಯಲಾಗಿದೆ. ನವೋದ್ಯಮಗಳು, ಕೈಗಾರಿಕೆ, ಹೊಸ ಉತ್ಪನ್ನಗಳು, ಎಲೆಕ್ಟ್ರಾನಿಕ್ಸ್, ಅಂತರರಾಷ್ಟ್ರೀಯ ಉಪಕರಣಗಳ ಪ್ರದರ್ಶನ ಮಳಿಗೆಗೆ ಗಣ್ಯರು, ವಿದ್ಯಾರ್ಥಿಗಳು, ಯುವಜನರು, ಆಸಕ್ತರು, ಉದ್ಯಮಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. <br><br>ಕೇಂದ್ರದ ಆವರಣದಲ್ಲಿ ತಂತ್ರಜ್ಞಾನ ಆಧಾರಿತ ಸೆಲ್ಫಿ ಪಾಯಿಂಟ್ಗಳನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.</p>.<p>ಭಾರತ, ಅಮೆರಿಕ, ಜಪಾನ್, ಇಸ್ರೇಲ್ ಸೇರಿದಂತೆ ಹಲವು ದೇಶಗಳ ತಂತ್ರಜ್ಞಾನ ಕಂಪನಿಗಳು ತಮ್ಮ ತಂತ್ರಜ್ಞಾನದ ಮಾದರಿಗಳನ್ನು ಪ್ರದರ್ಶಿಸುತ್ತಿವೆ. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು ಕೇಳಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕುತೂಹಲ ತಣಿಸಿಕೊಂಡರು. </p>.<p>ಟೆಕ್ ಶೃಂಗ ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಹೊಸ ಆವಿಷ್ಕಾರಗಳ ಕುರಿತು ಮಾಹಿತಿ ಪಡೆದುಕೊಂಡರು. </p>.<p>ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ), ಇನ್ವೆಸ್ಟ್ ಕರ್ನಾಟಕ ಫೋರಂ ಮಳಿಗೆಗಳಿಗೆ ಸಚಿವ ಎಂ. ಬಿ. ಪಾಟೀಲ ಭೇಟಿ ನೀಡಿ ವೀಕ್ಷಿಸಿದರು. ಭಾರತೀಯ ದೂರವಾಣಿ ಕಾರ್ಖಾನೆ (ಐಟಿಐ), ಎಸ್ಬಿಐ ಮುಂತಾದ ಮಳಿಗೆಗಳಿಗೂ ಭೇಟಿ ನೀಡಿ, ಅಲ್ಲಿಯ ವೈಶಿಷ್ಟ್ಯಗಳ ಬಗ್ಗೆ ತಿಳಿದುಕೊಂಡರು.</p>.<p>ಐಟಿಐ ಅಭಿವೃದ್ಧಿಪಡಿಸಿರುವ ಉತ್ಕೃಷ್ಟ ಗುಣಮಟ್ಟದ ವೈರ್ ಲೆಸ್ ಸೆಟ್ ನೋಡಿ ಅವುಗಳ ಮೂಲಕ ಸಂವಹನ ಕೂಡ ನಡೆಸಿದರು. ಹಾಗೆಯೇ ಐಟಿಐ ತಯಾರಿಸಿರುವ ಡ್ರೋನ್ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>