<p><strong>ಬೆಂಗಳೂರು:</strong> ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ತಮ್ಮ ಜನ್ಮದಿನದಿಂದ ಭಕ್ತರು ನೀಡಿದ ಕಾಣಿಕೆಯಿಂದ ಸಂಗ್ರಹವಾಗಿದ್ದ ₹84,000ವನ್ನು ತಂದೆಯ ನಿಧನದಿಂದ ಸಂಕಷ್ಟದಲ್ಲಿರುವ ಮಕ್ಕಳ ಶಿಕ್ಷಣಕ್ಕಾಗಿ ನೀಡಿದ್ದಾರೆ.</p>.<p>ಮಾರತ್ಹಳ್ಳಿ ನಿವಾಸಿ ನಾಗಭೂಷಣ ಅಕಾಲಿಕವಾಗಿ ನಿಧನರಾಗಿದ್ದರು. ಇದರಿಂದ ಅವರ ಕುಟುಬ ಸಂಕಷ್ಟಕ್ಕೆ ಸಿಲುಕಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿತ್ತು. ಇದನ್ನು ಮನಗಂಡ ಸ್ವಾಮೀಜಿ, ತಮ್ಮ ಜನ್ಮದಿನದಂದು ಸಂಗ್ರಹವಾದ ಕಾಣಿಕೆಯ ಮೊತ್ತವನ್ನು ನಾಗಭೂಷಣ ಅವರ ಮಗ ಮತ್ತು ಮಗಳ ಶಿಕ್ಷಣದ ವೆಚ್ಚಕ್ಕಾಗಿ ನೀಡಿದ್ದಾರೆ.</p>.<p>‘ಮಕ್ಕಳಾದ ಪ್ರಣವ್ ಮತ್ತು ಪ್ರತೀಕ್ಷಾ ವಿದ್ಯಾಭ್ಯಾಸ ಮುಂದುವರಿಸಲು ಆರ್ಥಿಕ ಸಂಕಷ್ಟ ಉಂಟಾಗಿರುವ ಬಗ್ಗೆ ತಾಯಿ ಜ್ಯೋತಿ ನಾಗಭೂಷಣ ಅವರು ತಿಳಿಸಿದ್ದರು. ಅದಕ್ಕೆ ಸ್ವಾಮೀಜಿ ಸ್ಪಂದಿಸಿದರು’ ಎಂದು ಮಠದ ಕಾರ್ಯದರ್ಶಿ ಸಿ. ಬಸವರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ತಮ್ಮ ಜನ್ಮದಿನದಿಂದ ಭಕ್ತರು ನೀಡಿದ ಕಾಣಿಕೆಯಿಂದ ಸಂಗ್ರಹವಾಗಿದ್ದ ₹84,000ವನ್ನು ತಂದೆಯ ನಿಧನದಿಂದ ಸಂಕಷ್ಟದಲ್ಲಿರುವ ಮಕ್ಕಳ ಶಿಕ್ಷಣಕ್ಕಾಗಿ ನೀಡಿದ್ದಾರೆ.</p>.<p>ಮಾರತ್ಹಳ್ಳಿ ನಿವಾಸಿ ನಾಗಭೂಷಣ ಅಕಾಲಿಕವಾಗಿ ನಿಧನರಾಗಿದ್ದರು. ಇದರಿಂದ ಅವರ ಕುಟುಬ ಸಂಕಷ್ಟಕ್ಕೆ ಸಿಲುಕಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿತ್ತು. ಇದನ್ನು ಮನಗಂಡ ಸ್ವಾಮೀಜಿ, ತಮ್ಮ ಜನ್ಮದಿನದಂದು ಸಂಗ್ರಹವಾದ ಕಾಣಿಕೆಯ ಮೊತ್ತವನ್ನು ನಾಗಭೂಷಣ ಅವರ ಮಗ ಮತ್ತು ಮಗಳ ಶಿಕ್ಷಣದ ವೆಚ್ಚಕ್ಕಾಗಿ ನೀಡಿದ್ದಾರೆ.</p>.<p>‘ಮಕ್ಕಳಾದ ಪ್ರಣವ್ ಮತ್ತು ಪ್ರತೀಕ್ಷಾ ವಿದ್ಯಾಭ್ಯಾಸ ಮುಂದುವರಿಸಲು ಆರ್ಥಿಕ ಸಂಕಷ್ಟ ಉಂಟಾಗಿರುವ ಬಗ್ಗೆ ತಾಯಿ ಜ್ಯೋತಿ ನಾಗಭೂಷಣ ಅವರು ತಿಳಿಸಿದ್ದರು. ಅದಕ್ಕೆ ಸ್ವಾಮೀಜಿ ಸ್ಪಂದಿಸಿದರು’ ಎಂದು ಮಠದ ಕಾರ್ಯದರ್ಶಿ ಸಿ. ಬಸವರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>