‘ಆರ್ಥಿಕ ಇಲಾಖೆಯಿಂದ 2ನೇ ತ್ರೈಮಾಸಿಕ ಕಂತಿನ ಹಣ ಬಿಡುಗಡೆ ಆಗದ ಕಾರಣ ಈ ತೊಂದರೆ ಉಂಟಾಗಿದೆ. ಅಧಿವೇಶನದಲ್ಲಿ ಬಜೆಟ್ಗೆ ಅನುಮತಿ ಸಿಕ್ಕಿದ ನಂತರ ಹಣ ಬಿಡುಗಡೆ ಮಾಡುತ್ತೇವೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ತಿಳಿಸಿದ್ದಾರೆ.