<p><strong>ಬೆಂಗಳೂರು</strong>: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳಭವಿಷ್ಯವನ್ನು ಅಂಧಕಾರಕ್ಕೆ ತಳ್ಳಿದೆ’ ಎಂದುಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ದೂರಿದ್ದಾರೆ.</p>.<p>‘ಅಕ್ಟೋಬರ್ ಆದರೂ ಶೈಕ್ಷಣಿಕ ವರ್ಷ ಈವರೆಗೆ ಆರಂಭಗೊಂಡಿಲ್ಲ. ಎನ್ಇಪಿ ಆಧಾರದ ಮೇಲೆ ಈ ವರ್ಷದ ಪಠ್ಯಕ್ರಮ ಇನ್ನೂ ತಯಾರಿ ಆಗದಿರುವುದೇ ಇದಕ್ಕೆ ಕಾರಣ.ನೂತನ ಪಠ್ಯಪುಸ್ತಕಗಳ ಆಧಾರದ ಮೇಲೆ ಅಧ್ಯಾಪಕರಿಗೆ ಪಾಠ ಮಾಡಲು ತರಬೇತಿ ಇಲ್ಲ ಎಂದಾದರೆ, ಅವರು ಪಾಠ ಮಾಡುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.</p>.<p>‘ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಸರ್ಕಾರಿ ಕಾಲೇಜುಗಳ ಸಂಖ್ಯೆ ಏರಿಸಿ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು. ಕೂಡಲೇ ಎನ್ಇಪಿ ವಾಪಸ್ ಪಡೆದು, ಹಿಂದಿನ ಶೈಕ್ಷಣಿಕ ವ್ಯವಸ್ಥೆಯನ್ನು ಅನುಸರಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳಭವಿಷ್ಯವನ್ನು ಅಂಧಕಾರಕ್ಕೆ ತಳ್ಳಿದೆ’ ಎಂದುಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ದೂರಿದ್ದಾರೆ.</p>.<p>‘ಅಕ್ಟೋಬರ್ ಆದರೂ ಶೈಕ್ಷಣಿಕ ವರ್ಷ ಈವರೆಗೆ ಆರಂಭಗೊಂಡಿಲ್ಲ. ಎನ್ಇಪಿ ಆಧಾರದ ಮೇಲೆ ಈ ವರ್ಷದ ಪಠ್ಯಕ್ರಮ ಇನ್ನೂ ತಯಾರಿ ಆಗದಿರುವುದೇ ಇದಕ್ಕೆ ಕಾರಣ.ನೂತನ ಪಠ್ಯಪುಸ್ತಕಗಳ ಆಧಾರದ ಮೇಲೆ ಅಧ್ಯಾಪಕರಿಗೆ ಪಾಠ ಮಾಡಲು ತರಬೇತಿ ಇಲ್ಲ ಎಂದಾದರೆ, ಅವರು ಪಾಠ ಮಾಡುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.</p>.<p>‘ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಸರ್ಕಾರಿ ಕಾಲೇಜುಗಳ ಸಂಖ್ಯೆ ಏರಿಸಿ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು. ಕೂಡಲೇ ಎನ್ಇಪಿ ವಾಪಸ್ ಪಡೆದು, ಹಿಂದಿನ ಶೈಕ್ಷಣಿಕ ವ್ಯವಸ್ಥೆಯನ್ನು ಅನುಸರಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>