ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಇಪಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಂಧಕಾರ: ಅಜಯ್ ಕಾಮತ್

Last Updated 7 ಅಕ್ಟೋಬರ್ 2021, 17:42 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳಭವಿಷ್ಯವನ್ನು ಅಂಧಕಾರಕ್ಕೆ ತಳ್ಳಿದೆ’ ಎಂದುಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ದೂರಿದ್ದಾರೆ.

‘ಅಕ್ಟೋಬರ್‌ ಆದರೂ ಶೈಕ್ಷಣಿಕ ವರ್ಷ ಈವರೆಗೆ ಆರಂಭಗೊಂಡಿಲ್ಲ. ಎನ್‌ಇಪಿ ಆಧಾರದ ಮೇಲೆ ಈ ವರ್ಷದ ಪಠ್ಯಕ್ರಮ ಇನ್ನೂ ತಯಾರಿ ಆಗದಿರುವುದೇ ಇದಕ್ಕೆ ಕಾರಣ.ನೂತನ ಪಠ್ಯಪುಸ್ತಕಗಳ ಆಧಾರದ ಮೇಲೆ ಅಧ್ಯಾಪಕರಿಗೆ ಪಾಠ ಮಾಡಲು ತರಬೇತಿ ಇಲ್ಲ ಎಂದಾದರೆ, ಅವರು ಪಾಠ ಮಾಡುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

‘ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಸರ್ಕಾರಿ ಕಾಲೇಜುಗಳ ಸಂಖ್ಯೆ ಏರಿಸಿ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು. ಕೂಡಲೇ ಎನ್‌ಇಪಿ ವಾಪಸ್ ಪಡೆದು, ಹಿಂದಿನ ಶೈಕ್ಷಣಿಕ ವ್ಯವಸ್ಥೆಯನ್ನು ಅನುಸರಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT