ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳಭವಿಷ್ಯವನ್ನು ಅಂಧಕಾರಕ್ಕೆ ತಳ್ಳಿದೆ’ ಎಂದುಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ದೂರಿದ್ದಾರೆ.
‘ಅಕ್ಟೋಬರ್ ಆದರೂ ಶೈಕ್ಷಣಿಕ ವರ್ಷ ಈವರೆಗೆ ಆರಂಭಗೊಂಡಿಲ್ಲ. ಎನ್ಇಪಿ ಆಧಾರದ ಮೇಲೆ ಈ ವರ್ಷದ ಪಠ್ಯಕ್ರಮ ಇನ್ನೂ ತಯಾರಿ ಆಗದಿರುವುದೇ ಇದಕ್ಕೆ ಕಾರಣ.ನೂತನ ಪಠ್ಯಪುಸ್ತಕಗಳ ಆಧಾರದ ಮೇಲೆ ಅಧ್ಯಾಪಕರಿಗೆ ಪಾಠ ಮಾಡಲು ತರಬೇತಿ ಇಲ್ಲ ಎಂದಾದರೆ, ಅವರು ಪಾಠ ಮಾಡುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.
‘ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಸರ್ಕಾರಿ ಕಾಲೇಜುಗಳ ಸಂಖ್ಯೆ ಏರಿಸಿ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು. ಕೂಡಲೇ ಎನ್ಇಪಿ ವಾಪಸ್ ಪಡೆದು, ಹಿಂದಿನ ಶೈಕ್ಷಣಿಕ ವ್ಯವಸ್ಥೆಯನ್ನು ಅನುಸರಿಸಬೇಕು’ ಎಂದು ಒತ್ತಾಯಿಸಿದ್ದಾರೆ.