<p><strong>ದೇವನಹಳ್ಳಿ:</strong> ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಎರಡನೇ ಬಾರಿಯೂ ಪ್ರಯಾಣಿಕರನ್ನು ಕರೆದುಕೊಂಡು ಹೋಗಿ ಮತ್ತೆ ವಾಪಸ್ ಬಂದಿದೆ.</p><p>ಇದರಿಂದ ರೊಚ್ಚಿಗೆದ್ದ ಪ್ರಯಾಣಿಕರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p><p>ಬುಧವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ಕಠ್ಮಂಡುವಿಗೆ ಹಾರಿದ್ದ ವಿಮಾನ ದಟ್ಟ ಮಂಜು ಕವಿದು ರನ್ ವೇ ಗೋಚರಿಸದ ಕಾರಣ 11 ತಾಸು ಆಗಸದಲ್ಲಿಯೇ ಹಾರಾಡಿ ಬೆಂಗಳೂರಿಗೆ ವಾಪಸ್ ಬಂದಿತ್ತು. ಅದಕ್ಕೂ ಮೊದಲು ಗೋರಖಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.</p><p>ಶನಿವಾರ ಮತ್ತೆ ಅದೇ ವಿಮಾನ ಬೆಳಗ್ಗೆ ಕಠ್ಮಂಡುವಿಗೆ ಹೊರಟಿತು. ಆದರೆ ಈ ಬಾರಿಯೂ ಅದು ಕಠ್ಮಂಡುವಿನಲ್ಲಿ ಇಳಿಯಲು ಸಾಧ್ಯವಾಗದೆ ಲಖನೌ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಬಳಿಕ ಪ್ರಯಾಣಿಕರನ್ನು ಹಲವಾರು ತಾಸು ವಿಮಾನದ ಒಳಗೆ ಕೂರಿಸಲಾಗಿತ್ತು. ಈ ವೇಳೆ ಪ್ರಯಾಣಿಕರಿಗೆ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಎರಡನೇ ಬಾರಿಯೂ ಪ್ರಯಾಣಿಕರನ್ನು ಕರೆದುಕೊಂಡು ಹೋಗಿ ಮತ್ತೆ ವಾಪಸ್ ಬಂದಿದೆ.</p><p>ಇದರಿಂದ ರೊಚ್ಚಿಗೆದ್ದ ಪ್ರಯಾಣಿಕರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p><p>ಬುಧವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ಕಠ್ಮಂಡುವಿಗೆ ಹಾರಿದ್ದ ವಿಮಾನ ದಟ್ಟ ಮಂಜು ಕವಿದು ರನ್ ವೇ ಗೋಚರಿಸದ ಕಾರಣ 11 ತಾಸು ಆಗಸದಲ್ಲಿಯೇ ಹಾರಾಡಿ ಬೆಂಗಳೂರಿಗೆ ವಾಪಸ್ ಬಂದಿತ್ತು. ಅದಕ್ಕೂ ಮೊದಲು ಗೋರಖಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.</p><p>ಶನಿವಾರ ಮತ್ತೆ ಅದೇ ವಿಮಾನ ಬೆಳಗ್ಗೆ ಕಠ್ಮಂಡುವಿಗೆ ಹೊರಟಿತು. ಆದರೆ ಈ ಬಾರಿಯೂ ಅದು ಕಠ್ಮಂಡುವಿನಲ್ಲಿ ಇಳಿಯಲು ಸಾಧ್ಯವಾಗದೆ ಲಖನೌ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಬಳಿಕ ಪ್ರಯಾಣಿಕರನ್ನು ಹಲವಾರು ತಾಸು ವಿಮಾನದ ಒಳಗೆ ಕೂರಿಸಲಾಗಿತ್ತು. ಈ ವೇಳೆ ಪ್ರಯಾಣಿಕರಿಗೆ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>