<p><strong>ಬೆಂಗಳೂರು:</strong>ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಿದ ಪಟಾಕಿ ಹೊಗೆಯಿಂದ ನಗರದ ವಿವಿಧೆಡೆ ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯಕಾರಕ ಕಣಗಳು (ಪಿಎಂ 2.5 ಮತ್ತು ಪಿಎಂ 10) ಕಾಣಿಸಿಕೊಂಡಿವೆ. ಇದರಿಂದಾಗಿ ಇಳಿಕೆ ಕಂಡಿದ್ದ ಗಾಳಿಯ ಗುಣಮಟ್ಟದ ಸೂಚ್ಯಂಕ (ಎಕ್ಯುಐ) ‘ಉತ್ತಮ’ದಿಂದ ‘ಸಮಾಧಾನಕರ’ ಹಂತಕ್ಕೆ ತಲುಪಿದೆ.</p>.<p>ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು. ಬಹುತೇಕ ಐಟಿ–ಬಿಟಿ ಕಂಪನಿಗಳು ಕಚೇರಿಗಳನ್ನು ಪುನರಾರಂಭಿಸಲು ನಿರಾಸಕ್ತಿ ತೋರಿದ್ದರಿಂದ ಹೆಬ್ಬಾಳ, ಜಯನಗರ, ಸೆಂಟ್ರಲ್ ಸಿಲ್ಕ್ ಬೋರ್ಡ್, ನಗರ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಎಕ್ಯೂಐ 50ರ ಗಡಿಯ ಆಸುಪಾಸಿನಲ್ಲಿಯೇ ಇತ್ತು. ಕಳೆದೊಂದು ತಿಂಗಳಿನಿಂದ ವಾಹನ ಸಂಚಾರ ಹೆಚ್ಚಳವಾದರೂ ಎಕ್ಯುಐ 100ರ ಮಿತಿಯೊಳಗಿತ್ತು.</p>.<p>ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಿದ ಪಟಾಕಿಗಳ ಮಾಲಿನ್ಯಕಾರಕ ಹೊಗೆಯಿಂದ ಗಾಳಿಯಗುಣಮಟ್ಟದ ಸೂಚ್ಯಂಕದಲ್ಲಿ ದಿಢೀರ್ ಏರಿಕೆ ಕಂಡಿದೆ.ಪಿಎಂ 10 ಹಾಗೂ ಪಿಎಂ 2.5 ಕಣಗಳಲ್ಲಿ ವ್ಯತ್ಯಾಸ ಉಂಟಾಗಿದೆ. ನಗರದ ಬಹುತೇಕ ಕಡೆ 1 ಸಾವಿರ ಲೀಟರ್ ಗಾಳಿಯಲ್ಲಿ ಪಿಎಂ 10ರ ಪ್ರಮಾಣ 100 ಮೈಕ್ರೊ ಗ್ರಾಂ ಹಾಗೂ ಪಿಎಂ 2.5ರ ಪ್ರಮಾಣ 60 ಮೈಕ್ರೊ ಗ್ರಾಂ ಮೀರಿದೆ.</p>.<p>ಕಳಪೆ ಹಂತ:ಹಬ್ಬದ ಮುನ್ನಾದಿನವಾದ ಗುರುವಾರ ಹಾಗೂ ಹಬ್ಬದ ದಿನವಾದ ಶುಕ್ರವಾರ ರಾತ್ರಿ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯ ಕಾರಕ ಕಣಗಳು ಕಾಣಿಸಿಕೊಂಡಿವೆ. ಸೆಂಟ್ರಲ್ ಸಿಲ್ಕ್ ಬೋರ್ಡ್, ಜಯನಗರ ಹಾಗೂ ಬಿಟಿಎಂ ಬಡಾವಾಣೆ ಸುತ್ತಮುತ್ತ ಎಕ್ಯುಐ 200ರ ಗಡಿ ದಾಟಿ, ಕಳಪೆ ಹಂತಕ್ಕೆ ತಲುಪಿದೆ. ಉಳಿದ ಕಡೆಯೂ ಈ ಪ್ರಮಾಣ ಸಾಮಾನ್ಯ ದಿನಗಳಿಗಿಂತ ಎರಡು ಪಟ್ಟು ಹೆಚ್ಚಳವಾಗಿದೆ.</p>.<p>‘ವಾತಾವರಣದಲ್ಲಿತೇವಾಂಶ ಹೆಚ್ಚಾದರೆ ದೂಳಿನ ಕಣಗಳು ಆಕಾಶಕ್ಕೆ ಹೋಗದೆ, ತಳಮಟ್ಟದಲ್ಲಿಯೇ ಗಾಳಿಯಲ್ಲಿ ತೇಲಾಡುತ್ತಿರುತ್ತವೆ. ಪಟಾಕಿಯ ವಿಷಕಾರಿ ಹೊಗೆ ಈ ಗಾಳಿಯನ್ನು ಸೇರಿದಾಗ ಮಲಿನಕಾರಕ ಕಣಗಳು ಗಾಳಿಯಲ್ಲಿ ಉಳಿಯುತ್ತವೆ. ಮಳೆಯ ನಡುವೆಯೂ ಕೆಲವಡೆ ಪಟಾಕಿಗಳನ್ನು ಸಿಡಿಸಿದ್ದರಿಂದ ಕೆಲವೆಡೆ ಗಾಳಿಯ ಗುಣಮಟ್ಟದ ಸೂಚ್ಯಂಕ ಕೊಂಚ ಏರಿಕೆ ಕಂಡಿದೆ’ ಎಂದುಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಪರಿಸರ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಗಾಳಿಯ ಗುಣಮಟ್ಟದ ಸೂಚ್ಯಂಕವು 50ರ ಮಿತಿಯ ಒಳಗಡೆಯಿದ್ದಲ್ಲಿ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಕಾಣಿಸಿಕೊಳ್ಳುವುದಿಲ್ಲ. 100ರ ಗಡಿ ದಾಟಿದಲ್ಲಿ ಶ್ವಾಸಕೋಶ, ಹೃದಯ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ’ ಎಂದು ವಿವರಿಸಿದರು.</p>.<p class="Briefhead">ಹಬ್ಬದ ದಿನ ಎಕ್ಯುಐ (ನ.5)</p>.<p>ಮಾಪನಾ ಕೇಂದ್ರವಿರುವ ಪ್ರದೇಶ; ಎಕ್ಯುಐ ಕನಿಷ್ಠ;ಎಕ್ಯುಐ ಗರಿಷ್ಠ</p>.<p>ಹೆಬ್ಬಾಳ;07; 156</p>.<p>ಜಯನಗರ;28; 220</p>.<p>ನಿಮ್ಹಾನ್ಸ್;07; 47</p>.<p>ಸೆಂಟ್ರಲ್ ಸಿಲ್ಕ್ ಬೋರ್ಡ್; 27; 356</p>.<p>ನಗರದ ರೈಲು ನಿಲ್ದಾಣ; 48; 117</p>.<p>ಸಾಣೆಗುರುವನಹಳ್ಳಿ; 38; 99</p>.<p>ಕಾಡಬೀಸನಹಳ್ಳಿ;09; 85</p>.<p>ಬಾಪೂಜಿನಗರ; 19; 131</p>.<p>ಪೀಣ್ಯ; 51; 100</p>.<p>ಬಿಟಿಎಂ ಬಡಾವಣೆ; 18; 194</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಿದ ಪಟಾಕಿ ಹೊಗೆಯಿಂದ ನಗರದ ವಿವಿಧೆಡೆ ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯಕಾರಕ ಕಣಗಳು (ಪಿಎಂ 2.5 ಮತ್ತು ಪಿಎಂ 10) ಕಾಣಿಸಿಕೊಂಡಿವೆ. ಇದರಿಂದಾಗಿ ಇಳಿಕೆ ಕಂಡಿದ್ದ ಗಾಳಿಯ ಗುಣಮಟ್ಟದ ಸೂಚ್ಯಂಕ (ಎಕ್ಯುಐ) ‘ಉತ್ತಮ’ದಿಂದ ‘ಸಮಾಧಾನಕರ’ ಹಂತಕ್ಕೆ ತಲುಪಿದೆ.</p>.<p>ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು. ಬಹುತೇಕ ಐಟಿ–ಬಿಟಿ ಕಂಪನಿಗಳು ಕಚೇರಿಗಳನ್ನು ಪುನರಾರಂಭಿಸಲು ನಿರಾಸಕ್ತಿ ತೋರಿದ್ದರಿಂದ ಹೆಬ್ಬಾಳ, ಜಯನಗರ, ಸೆಂಟ್ರಲ್ ಸಿಲ್ಕ್ ಬೋರ್ಡ್, ನಗರ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಎಕ್ಯೂಐ 50ರ ಗಡಿಯ ಆಸುಪಾಸಿನಲ್ಲಿಯೇ ಇತ್ತು. ಕಳೆದೊಂದು ತಿಂಗಳಿನಿಂದ ವಾಹನ ಸಂಚಾರ ಹೆಚ್ಚಳವಾದರೂ ಎಕ್ಯುಐ 100ರ ಮಿತಿಯೊಳಗಿತ್ತು.</p>.<p>ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಿದ ಪಟಾಕಿಗಳ ಮಾಲಿನ್ಯಕಾರಕ ಹೊಗೆಯಿಂದ ಗಾಳಿಯಗುಣಮಟ್ಟದ ಸೂಚ್ಯಂಕದಲ್ಲಿ ದಿಢೀರ್ ಏರಿಕೆ ಕಂಡಿದೆ.ಪಿಎಂ 10 ಹಾಗೂ ಪಿಎಂ 2.5 ಕಣಗಳಲ್ಲಿ ವ್ಯತ್ಯಾಸ ಉಂಟಾಗಿದೆ. ನಗರದ ಬಹುತೇಕ ಕಡೆ 1 ಸಾವಿರ ಲೀಟರ್ ಗಾಳಿಯಲ್ಲಿ ಪಿಎಂ 10ರ ಪ್ರಮಾಣ 100 ಮೈಕ್ರೊ ಗ್ರಾಂ ಹಾಗೂ ಪಿಎಂ 2.5ರ ಪ್ರಮಾಣ 60 ಮೈಕ್ರೊ ಗ್ರಾಂ ಮೀರಿದೆ.</p>.<p>ಕಳಪೆ ಹಂತ:ಹಬ್ಬದ ಮುನ್ನಾದಿನವಾದ ಗುರುವಾರ ಹಾಗೂ ಹಬ್ಬದ ದಿನವಾದ ಶುಕ್ರವಾರ ರಾತ್ರಿ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯ ಕಾರಕ ಕಣಗಳು ಕಾಣಿಸಿಕೊಂಡಿವೆ. ಸೆಂಟ್ರಲ್ ಸಿಲ್ಕ್ ಬೋರ್ಡ್, ಜಯನಗರ ಹಾಗೂ ಬಿಟಿಎಂ ಬಡಾವಾಣೆ ಸುತ್ತಮುತ್ತ ಎಕ್ಯುಐ 200ರ ಗಡಿ ದಾಟಿ, ಕಳಪೆ ಹಂತಕ್ಕೆ ತಲುಪಿದೆ. ಉಳಿದ ಕಡೆಯೂ ಈ ಪ್ರಮಾಣ ಸಾಮಾನ್ಯ ದಿನಗಳಿಗಿಂತ ಎರಡು ಪಟ್ಟು ಹೆಚ್ಚಳವಾಗಿದೆ.</p>.<p>‘ವಾತಾವರಣದಲ್ಲಿತೇವಾಂಶ ಹೆಚ್ಚಾದರೆ ದೂಳಿನ ಕಣಗಳು ಆಕಾಶಕ್ಕೆ ಹೋಗದೆ, ತಳಮಟ್ಟದಲ್ಲಿಯೇ ಗಾಳಿಯಲ್ಲಿ ತೇಲಾಡುತ್ತಿರುತ್ತವೆ. ಪಟಾಕಿಯ ವಿಷಕಾರಿ ಹೊಗೆ ಈ ಗಾಳಿಯನ್ನು ಸೇರಿದಾಗ ಮಲಿನಕಾರಕ ಕಣಗಳು ಗಾಳಿಯಲ್ಲಿ ಉಳಿಯುತ್ತವೆ. ಮಳೆಯ ನಡುವೆಯೂ ಕೆಲವಡೆ ಪಟಾಕಿಗಳನ್ನು ಸಿಡಿಸಿದ್ದರಿಂದ ಕೆಲವೆಡೆ ಗಾಳಿಯ ಗುಣಮಟ್ಟದ ಸೂಚ್ಯಂಕ ಕೊಂಚ ಏರಿಕೆ ಕಂಡಿದೆ’ ಎಂದುಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಪರಿಸರ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಗಾಳಿಯ ಗುಣಮಟ್ಟದ ಸೂಚ್ಯಂಕವು 50ರ ಮಿತಿಯ ಒಳಗಡೆಯಿದ್ದಲ್ಲಿ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಕಾಣಿಸಿಕೊಳ್ಳುವುದಿಲ್ಲ. 100ರ ಗಡಿ ದಾಟಿದಲ್ಲಿ ಶ್ವಾಸಕೋಶ, ಹೃದಯ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ’ ಎಂದು ವಿವರಿಸಿದರು.</p>.<p class="Briefhead">ಹಬ್ಬದ ದಿನ ಎಕ್ಯುಐ (ನ.5)</p>.<p>ಮಾಪನಾ ಕೇಂದ್ರವಿರುವ ಪ್ರದೇಶ; ಎಕ್ಯುಐ ಕನಿಷ್ಠ;ಎಕ್ಯುಐ ಗರಿಷ್ಠ</p>.<p>ಹೆಬ್ಬಾಳ;07; 156</p>.<p>ಜಯನಗರ;28; 220</p>.<p>ನಿಮ್ಹಾನ್ಸ್;07; 47</p>.<p>ಸೆಂಟ್ರಲ್ ಸಿಲ್ಕ್ ಬೋರ್ಡ್; 27; 356</p>.<p>ನಗರದ ರೈಲು ನಿಲ್ದಾಣ; 48; 117</p>.<p>ಸಾಣೆಗುರುವನಹಳ್ಳಿ; 38; 99</p>.<p>ಕಾಡಬೀಸನಹಳ್ಳಿ;09; 85</p>.<p>ಬಾಪೂಜಿನಗರ; 19; 131</p>.<p>ಪೀಣ್ಯ; 51; 100</p>.<p>ಬಿಟಿಎಂ ಬಡಾವಣೆ; 18; 194</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>