‘ನೈಜ ಸಮಯದಲ್ಲಿ ಎಕ್ಯೂಐ ಪರಿಶೀಲಿಸಲು ನಗರದ 7 ಕಡೆ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಅದರ ಮೂಲಕ ಐಕ್ಯೂಐ ಮಾಹಿತಿ ಪಡೆದು, ದೂರವಾಣಿ ಸಂಖ್ಯೆಗೆ ಕಳುಹಿಸಲಾಗುತ್ತಿದೆ. ಹೆಬ್ಬಾಳ, ಜಯನಗರ, ನಿಮ್ಹಾನ್ಸ್, ಸೆಂಟ್ರಲ್ ಸಿಲ್ಕ್ ಬೋರ್ಡ್, ನಗರ ರೈಲು ನಿಲ್ದಾಣ, ಬಸವೇಶ್ವರನಗರ, ಬಾಪುಜಿನಗರ,ಕಾಡುಬಿಸನಹಳ್ಳಿ, ಪೀಣ್ಯ ಹಾಗೂ ಬಿಟಿಎಂ ಬಡಾವಣೆಯ ಸುತ್ತಮುತ್ತಲಿನ ಪ್ರದೇಶದಲ್ಲಿನ ಗಾಳಿಯ ಗುಣಮಟ್ಟದ ಸೂಚ್ಯಂಕ ತಿಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಕಾಶವಾಣಿಯಲ್ಲಿ ಹವಾಮಾನ ವರದಿ ನೀಡಿದಂತೆ ಈ ಮಾಹಿತಿಯನ್ನೂ ಒದಗಿಸಲಾಗುವುದು’ ಎಂದು ಮಂಡಳಿಯ ಪರಿಸರ ಅಧಿಕಾರಿ ಶ್ರೀಧರ್ ನಾಯ್ಕ್ ತಿಳಿಸಿದರು.