ಬಿಬಿಎಂಪಿ ಪಶುಪಾಲನಾ ವಿಭಾಗದ ಜಾನುವಾರು ಅಧಿಕಾರಿ ಲಕ್ಷೀನಾರಾಯಣ, ‘ಬಾಗಲೂರು, ಮಾರುತಿನಗರ, ಅಟ್ಟೂರು ಬಡಾವಣೆ ಮತ್ತಿತರ ಕಡೆಗಳಲ್ಲಿ ದಾಳಿ ನಡೆಸಿದ್ದೇವೆ. ಮಾಂಸದ ಅಂಗಡಿಗಳನ್ನು ಮುಚ್ಚಿಸಿ, ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಕೆಲವು ಮಾಲೀಕರಿಗೆ ದಂಡ ವಿಧಿಸಲಾಗಿದೆ. ಅಗತ್ಯ ಸಿಬ್ಬಂದಿಯನ್ನು ಒದಗಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.