<p><strong>ಬೆಂಗಳೂರು:</strong> ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ವಿತರಿಸಲು ರೂಪಿಸಿರುವ ‘ಐರಾವತ ಯೋಜನೆ’ ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿಸಲಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಬಾಗೇವಾಡಿ ಅವರು ದೂರು ನೀಡಿದ್ದಾರೆ. ‘ಕೆಲ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಅವರ ಪತ್ತೆಗಾಗಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. 2018–19 ಹಾಗೂ 2019–20ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿಗಳಿಗಾಗಿ ₹ 5 ಲಕ್ಷ ಮಂಜೂರಾಗಿರುವ ಬಗ್ಗೆ ನಕಲಿ ಆದೇಶಗಳನ್ನು ಸೃಷ್ಟಿಸಿ ಯಾದಗಿರಿ ಜಿಲ್ಲೆಯ 17 ಜನರಿಗೆ ವಿತರಿಸಲಾಗಿದೆ. ಆದೇಶ ಬಗ್ಗೆ ಅನುಮಾನಗೊಂಡ ಅಧಿಕಾರಿಗಳು ಪರಿಶೀಲಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ’ ಎಂದು ತಿಳಿಸಿದರು.</p>.<p>‘ಜನರಿಂದ ಹಣ ಪಡೆದಿರುವ ಕೆಲವರು, ನಕಲಿ ಆದೇಶ ನೀಡಿ ವಂಚಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕೃತ್ಯದಲ್ಲಿ ಕೆಲ ಚಾಲಕರು, ಸಿಬ್ಬಂದಿ ಭಾಗಿಯಾಗಿರುವ ಶಂಕೆಯು ಇದೆ. ವಿಚಾರಣೆ ಬಳಿಕ, ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ವಿತರಿಸಲು ರೂಪಿಸಿರುವ ‘ಐರಾವತ ಯೋಜನೆ’ ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿಸಲಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಬಾಗೇವಾಡಿ ಅವರು ದೂರು ನೀಡಿದ್ದಾರೆ. ‘ಕೆಲ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಅವರ ಪತ್ತೆಗಾಗಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. 2018–19 ಹಾಗೂ 2019–20ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿಗಳಿಗಾಗಿ ₹ 5 ಲಕ್ಷ ಮಂಜೂರಾಗಿರುವ ಬಗ್ಗೆ ನಕಲಿ ಆದೇಶಗಳನ್ನು ಸೃಷ್ಟಿಸಿ ಯಾದಗಿರಿ ಜಿಲ್ಲೆಯ 17 ಜನರಿಗೆ ವಿತರಿಸಲಾಗಿದೆ. ಆದೇಶ ಬಗ್ಗೆ ಅನುಮಾನಗೊಂಡ ಅಧಿಕಾರಿಗಳು ಪರಿಶೀಲಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ’ ಎಂದು ತಿಳಿಸಿದರು.</p>.<p>‘ಜನರಿಂದ ಹಣ ಪಡೆದಿರುವ ಕೆಲವರು, ನಕಲಿ ಆದೇಶ ನೀಡಿ ವಂಚಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕೃತ್ಯದಲ್ಲಿ ಕೆಲ ಚಾಲಕರು, ಸಿಬ್ಬಂದಿ ಭಾಗಿಯಾಗಿರುವ ಶಂಕೆಯು ಇದೆ. ವಿಚಾರಣೆ ಬಳಿಕ, ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>