ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಶಿಕ್ಷಣ ನಡೆಸಲು ತಜ್ಞರ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ತಿರಸ್ಕರಿಸುವಂತೆ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ) ಆಗ್ರಹಿಸಿದೆ.
'ಎಷ್ಟೋ ವಿದ್ಯಾರ್ಥಿಗಳು ಇಂಟರ್ನೆಟ್, ಮೊಬೈಲ್, ಕಂಪ್ಯೂಟರ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ತಾರತಮ್ಯದಿಂದ ಕೂಡಿರುವ ಆನ್ಲೈನ್ ಶಿಕ್ಷಣ ಶ್ರೀಮಂತರ ಪರವಾಗಿದೆ' ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ದೂರಿದ್ದಾರೆ.