<p><strong>ಬೆಂಗಳೂರು</strong>: ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನ ಪಡೆದು ವಂಚಿಸಿದ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್. ಹರೀಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.</p>.<p>ವಿಚಾರಣೆಗೆ ಹಾಜರಾಗಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಚಂದ್ರಾ ಲೇಔಟ್ ಠಾಣೆ ಪೊಲೀಸರು ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ತೆರಳಿ ಹಾಜರುಪಡಿಸಿದ್ದರು. ಇಬ್ಬರೂ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.</p>.<p>ವನಿತಾ ಎಸ್. ಐತಾಳ್ ಅವರಿಗೆ ಕರೆ ಮಾಡಿ ಡಿ.ಕೆ.ಸುರೇಶ್ ಅವರ ಧ್ವನಿಯಲ್ಲಿ ಮಾತನಾಡಿದ ಆರೋಪ ಎದುರಿಸುತ್ತಿರುವ ಕನ್ನಡ ನಟ ಧರ್ಮೇಂದ್ರ, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.</p>.<p>ದೂರುದಾರರಾದ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್. ಐತಾಳ್ ಅವರು ಸಹ ವಿಚಾರಣೆಗೆ ಹಾಜರಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಚಿನ್ನ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳು ಹಾಗೂ ಆಡಿಯೊ ಕ್ಲಿಪಿಂಗ್ಗಳನ್ನು ಪೊಲೀಸರಿಗೆ ನೀಡಿರುವುದಾಗಿ ತಿಳಿಸಿದರು. </p>.<p>ಡಿ.ಕೆ.ಸುರೇಶ್ ಅವರ ಸಹೋದರಿಯೆಂದು ನಂಬಿಸಿ ಖರೀದಿ ನೆಪದಲ್ಲಿ ₹9.82 ಕೋಟಿ ಮೌಲ್ಯದ 14 ಕೆ.ಜಿ. 660 ಗ್ರಾಂ ಚಿನ್ನ ವಂಚಿಸಿದ್ದಾರೆ ಎಂದು ವನಿತಾ ಎಸ್. ಐತಾಳ್ ಅವರು ನೀಡಿದ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ. ಎನ್ ಹಾಗೂ ಧರ್ಮೇಂದ್ರ ಬಿ. ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನ ಪಡೆದು ವಂಚಿಸಿದ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್. ಹರೀಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.</p>.<p>ವಿಚಾರಣೆಗೆ ಹಾಜರಾಗಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಚಂದ್ರಾ ಲೇಔಟ್ ಠಾಣೆ ಪೊಲೀಸರು ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ತೆರಳಿ ಹಾಜರುಪಡಿಸಿದ್ದರು. ಇಬ್ಬರೂ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.</p>.<p>ವನಿತಾ ಎಸ್. ಐತಾಳ್ ಅವರಿಗೆ ಕರೆ ಮಾಡಿ ಡಿ.ಕೆ.ಸುರೇಶ್ ಅವರ ಧ್ವನಿಯಲ್ಲಿ ಮಾತನಾಡಿದ ಆರೋಪ ಎದುರಿಸುತ್ತಿರುವ ಕನ್ನಡ ನಟ ಧರ್ಮೇಂದ್ರ, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.</p>.<p>ದೂರುದಾರರಾದ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್. ಐತಾಳ್ ಅವರು ಸಹ ವಿಚಾರಣೆಗೆ ಹಾಜರಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಚಿನ್ನ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳು ಹಾಗೂ ಆಡಿಯೊ ಕ್ಲಿಪಿಂಗ್ಗಳನ್ನು ಪೊಲೀಸರಿಗೆ ನೀಡಿರುವುದಾಗಿ ತಿಳಿಸಿದರು. </p>.<p>ಡಿ.ಕೆ.ಸುರೇಶ್ ಅವರ ಸಹೋದರಿಯೆಂದು ನಂಬಿಸಿ ಖರೀದಿ ನೆಪದಲ್ಲಿ ₹9.82 ಕೋಟಿ ಮೌಲ್ಯದ 14 ಕೆ.ಜಿ. 660 ಗ್ರಾಂ ಚಿನ್ನ ವಂಚಿಸಿದ್ದಾರೆ ಎಂದು ವನಿತಾ ಎಸ್. ಐತಾಳ್ ಅವರು ನೀಡಿದ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ. ಎನ್ ಹಾಗೂ ಧರ್ಮೇಂದ್ರ ಬಿ. ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>