ಎಐಟಿಯುಸಿ ಕಾರ್ಯಾಧ್ಯಕ್ಷ ನಾಯಕ ಎಚ್. ಮಹದೇವನ್ ಮಾತನಾಡಿ, ‘ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕಾರ್ಮಿಕ ವರ್ಗವನ್ನು ವಿಮೋಚನಾ ಚಳವಳಿ ಮೂಲಕ ಒಟ್ಟುಗೂಡಿಸಲು ಎಐಟಿಯುಸಿ ಪ್ರಮುಖ ಪಾತ್ರ ವಹಿಸಿತು. ಕಾರ್ಮಿಕರ ಶೋಷಣೆಯ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದೆ. ಎಐಟಿಯುಸಿ ಚಳವಳಿಗಳ ಫಲವಾಗಿ ಸಂಘಟಿತ ವಲಯದಲ್ಲಿ ಕಾರ್ಮಿಕರ ಬದುಕು ಸುಧಾರಿಸಲು ಸಾಧ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು.