ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎ. ವಿಜಯಭಾಸ್ಕರ್, ‘ಕೇಂದ್ರ ಸರ್ಕಾರವು ಕಾರ್ಮಿಕರ ಕಾನೂನು ಸುಧಾರಣೆ ಹೆಸರಿನಲ್ಲಿ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕರನ್ನು ಆಳುವ ವರ್ಗದ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆದಿದೆ. ಕಾರ್ಮಿಕರ ಮುಷ್ಕರದ ಹಕ್ಕು, ಕಾರ್ಖಾನೆಗಳ ತಪಾಸಣೆ, ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಕಟ್ಟಡ ಕಾರ್ಮಿಕರ ಸಾಮಾಜಿಕ ಸೌಲಭ್ಯಗಳು ನಾಶವಾಗುವ ಹಂತದಲ್ಲಿವೆ’ ಎಂದರು.