‘ಕೇಂದ್ರ ಸರ್ಕಾರವು 2020ರ ಮಾರ್ಚ್ 30ರಂದು ಈ ಯೋಜನೆಯನ್ನು ಘೋಷಿಸಿತ್ತು. ಈ ವರ್ಷದ ಮಾರ್ಚ್ 24ರಂದು ಪ್ರಕಟಣೆಯೊಂದನ್ನು ಹೊರಡಿಸಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿಯವರು ಈ ಯೋಜನೆಯನ್ನು ಮುಕ್ತಾಯಗೊಳಿಸಿರುವುದಾಗಿ ಅಧಿಸೂಚನೆ ಹೊರಡಿಸಿದ್ದಾರೆ. ಸರ್ಕಾರದ ಈ ನಿಲುವಿನಿಂದ ಕೊರೊನಾ ಯೋಧರಿಗೆ ದಿಕ್ಕೇ ತೋಚದಾಗಿದೆ’ ಎಂದುಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ತಿಳಿಸಿದ್ದಾರೆ.