<p><strong>ಬೆಂಗಳೂರು:</strong> ರಾಷ್ಟೀಯ ಪ್ರತಿಭಾನ್ವೇಷಣೆ ಪರೀಕ್ಷೆಯ (ಎನ್ಟಿಎಸ್ಇ) ಮೊದಲ ಹಂತದಲ್ಲಿ ಆಕಾಶ್ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿ, ನಗರದ ರಿಧಿ ಅಗರ್ವಾಲ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ ಎಂದು ಸಂಸ್ಥೆ ಹೇಳಿದೆ.</p>.<p>ವಿಜ್ಞಾನ ಮತ್ತು ಸಮಾಜ ವಿಜ್ಞಾನ ಹಾಗೂ ವೈದ್ಯಕೀಯ ಮತ್ತು ಎಂಜಿನಿಯರಿಂಗ್ನಲ್ಲಿ ಅಭ್ಯಾಸ ಮುಂದುವರಿಸಲು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಕ್ಕಾಗಿ ರೂಪಿಸಲಾಗಿರುವ ಈ ಪರೀಕ್ಷೆಯಲ್ಲಿ ಸಂಸ್ಥೆಯ ಇತರೆ ನಾಲ್ವರು ವಿದ್ಯಾರ್ಥಿಗಳೂ ಉತ್ತಮ ರ್ಯಾಂಕ್ ಪಡೆದಿದ್ದಾರೆ ಎಂದು ಸಂಸ್ಥೆ ಹೇಳಿದೆ.</p>.<p>ಸಾಮಾನ್ಯ ವರ್ಗದಲ್ಲಿ 200 ಅಂಕಗಳಿಗೆ 188 ಅಂಕಗಳನ್ನು ರಿಧಿ ಗಳಿಸಿದ್ದಾರೆ. ಬೆಂಗಳೂರಿನ ಹೇಮಾಂಗ್ ದವೆ 176, ದೀಪಕ್ ಚರಣ್ 173, ವೈಭವ್ ರಾಜ್ 171 ಹಾಗೂ ಅನನ್ಯಾ ಹಲಗತ್ತಿ 170 ಅಂಕಗಳನ್ನು ಪಡೆದಿದ್ದಾರೆ.</p>.<p>‘ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಎನ್ಟಿಎಸ್ಇಯಲ್ಲಿ ರಾಜ್ಯದಲ್ಲಿಯೇ ಪ್ರಮುಖ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ’ ಎಂದು ಆಕಾಶ್ ಎಜುಕೇಷನಲ್ ಸರ್ವಿಸಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಕಾಶ್ ಚೌಧರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟೀಯ ಪ್ರತಿಭಾನ್ವೇಷಣೆ ಪರೀಕ್ಷೆಯ (ಎನ್ಟಿಎಸ್ಇ) ಮೊದಲ ಹಂತದಲ್ಲಿ ಆಕಾಶ್ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿ, ನಗರದ ರಿಧಿ ಅಗರ್ವಾಲ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ ಎಂದು ಸಂಸ್ಥೆ ಹೇಳಿದೆ.</p>.<p>ವಿಜ್ಞಾನ ಮತ್ತು ಸಮಾಜ ವಿಜ್ಞಾನ ಹಾಗೂ ವೈದ್ಯಕೀಯ ಮತ್ತು ಎಂಜಿನಿಯರಿಂಗ್ನಲ್ಲಿ ಅಭ್ಯಾಸ ಮುಂದುವರಿಸಲು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಕ್ಕಾಗಿ ರೂಪಿಸಲಾಗಿರುವ ಈ ಪರೀಕ್ಷೆಯಲ್ಲಿ ಸಂಸ್ಥೆಯ ಇತರೆ ನಾಲ್ವರು ವಿದ್ಯಾರ್ಥಿಗಳೂ ಉತ್ತಮ ರ್ಯಾಂಕ್ ಪಡೆದಿದ್ದಾರೆ ಎಂದು ಸಂಸ್ಥೆ ಹೇಳಿದೆ.</p>.<p>ಸಾಮಾನ್ಯ ವರ್ಗದಲ್ಲಿ 200 ಅಂಕಗಳಿಗೆ 188 ಅಂಕಗಳನ್ನು ರಿಧಿ ಗಳಿಸಿದ್ದಾರೆ. ಬೆಂಗಳೂರಿನ ಹೇಮಾಂಗ್ ದವೆ 176, ದೀಪಕ್ ಚರಣ್ 173, ವೈಭವ್ ರಾಜ್ 171 ಹಾಗೂ ಅನನ್ಯಾ ಹಲಗತ್ತಿ 170 ಅಂಕಗಳನ್ನು ಪಡೆದಿದ್ದಾರೆ.</p>.<p>‘ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಎನ್ಟಿಎಸ್ಇಯಲ್ಲಿ ರಾಜ್ಯದಲ್ಲಿಯೇ ಪ್ರಮುಖ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ’ ಎಂದು ಆಕಾಶ್ ಎಜುಕೇಷನಲ್ ಸರ್ವಿಸಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಕಾಶ್ ಚೌಧರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>