ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಜಿ.ಎ ಕೋಟೆಯಾರ್ ಅವರು, ‘ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು 2011ರಲ್ಲಿ ದೊಡ್ಡ ಆಂದೋಲನಾ ಮಾಡಿ ಲೋಕಪಾಲ ಕಾಯ್ದೆಗೆ ಆಗ್ರಹಿಸಿದ್ದರು. ಇಡೀ ದೇಶದಲ್ಲಿ ಅವರ ಹೋರಾಟಕ್ಕೆ ಬೆಂಬಲ ಸಿಕ್ಕಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಲೋಕಪಾಲ ಕಾಯ್ದೆಯನ್ನು ಜಾರಿ ಮಾಡಿತು. ಆದರೆ, ಆ ನಂತರ ಬಂದ ಬಿಜೆಪಿ ಸರ್ಕಾರ ಅದನ್ನು ಕಾರ್ಯಗತಗೊಳಿಸಲಿಲ್ಲ, ಲೋಕಪಾಲರನ್ನು ನೇಮಕ ಮಾಡಲಿಲ್ಲ. ಆದ್ದರಿಂದ ಅಣ್ಣಾ ಹಜಾರೆ ಅವರು ಈಗ ಮತ್ತೊಮ್ಮೆ ದೆಹಲಿಯಲ್ಲಿ ಹೋರಾಟ ಆರಂಭಿಸಿದ್ದಾರೆ. ಅದನ್ನು ಬೆಂಬಲಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸಂಘಟನೆ ವತಿಯಿಂದ ಇದೇ 28ರಂದು ಧರಣಿ ನಡೆಸಲಾಗುವುದು’ ಎಂದರು.