ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಕಾರ ಭಾರತಿಯ ಅಖಿಲ ಭಾರತ ಮಹಾಮಂತ್ರಿ ಅಶ್ವಿನ್ ದಲ್ವಿ, ‘ಈ ಕಾರ್ಯಕ್ರಮವನ್ನು ‘ಸಮರಸತೆ’ ಎಂಬ ಪರಿಕಲ್ಪನೆಯಡಿ ಆಯೋಜಿಸಲಾಗುತ್ತಿದ್ದು, ದೇಶದ ವಿವಿಧೆಡೆಯಿಂದ 2,500ಕ್ಕೂ ಹೆಚ್ಚು ಕಲಾಸಾಧಕರು ಬರಲಿದ್ದಾರೆ. ಫೆ.1ರ ಸಂಜೆ 4.30ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜನಪದ ಕಲಾವಿದೆ ಮಂಜಮ್ಮ ಜೋಗತಿ, ಇತಿಹಾಸ ತಜ್ಞ ವಿಕ್ರಮ ಸಂಪತ್ ಮತ್ತು ತಬಲಾ ವಿದ್ವಾಂಸ ಪಂಡಿತ್ ರವೀಂದ್ರ ಯಾವಗಲ್ ಮತ್ತು ವಿಜಯನಗರ ರಾಜ ವಂಶಸ್ಥ ಕೃಷ್ಣದೇವರಾಯ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.