<p><strong>ಬೆಂಗಳೂರು:</strong> ಶಾಲಾ ಮಕ್ಕಳ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಕ್ಷಯಪಾತ್ರ ಫೌಂಡೇಷನ್, 500 ಕೋಟಿ ಊಟ ವಿತರಿಸಿದ ಸಾಧನೆ ಮಾಡಿದೆ. </p>.<p>ಸಂಸ್ಥೆಯು 25 ವರ್ಷಗಳ ಅವಧಿಯಲ್ಲಿ, ಕೇಂದ್ರ ಸರ್ಕಾರದ ‘ಪಿಎಂ ಪೋಷಣ್’ ಯೋಜನೆಯಡಿ ಈ ಸಾಧನೆ ಮಾಡಿದೆ. ಕೇಂದ್ರ ಸರ್ಕಾರವು ‘ವಿಕಸಿತ ಭಾರತಕ್ಕಾಗಿ ಪೌಷ್ಟಿಕ ಮತ್ತು ಸುಶಿಕ್ಷಿತ ಭಾರತ’ ಎಂಬ ಆಶಯದೊಂದಿಗೆ, ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇದೇ 17ರಂದು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ. </p>.<p>ಫೌಂಡೇಷನ್ನ ಅಧ್ಯಕ್ಷ ಮಧು ಪಂಡಿತ ದಾಸ, ಉಪಾಧ್ಯಕ್ಷ ಚಂಚಲಪತಿ ದಾಸ ಹಾಗೂ ಟ್ರಸ್ಟಿಗಳು ಪಾಲ್ಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸ್ಥೆಯ ಪ್ರತಿನಿಧಿಗಳನ್ನು ಗೌರವಿಸಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. </p>.<p>‘2000ನೇ ಇಸವಿಯಲ್ಲಿ ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಆರಂಭವಾದ ಅಕ್ಷಯಪಾತ್ರದ ಮಧ್ಯಾಹ್ನದ ಬಿಸಿಯೂಟ ಯೋಜನೆ, ಇಂದು ಹೆಮ್ಮರವಾಗಿ ಬೆಳೆದಿದೆ. ಪ್ರಸ್ತುತ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಸುಮಾರು 23.5 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪ್ರತಿದಿನ ಪೌಷ್ಟಿಕ ಆಹಾರವನ್ನು ತಲುಪಿಸಲಾಗುತ್ತಿದೆ. ಶಾಲಾ ಹಂತದಲ್ಲಿಯೇ ಹಸಿವನ್ನು ನೀಗಿಸುವ ಮೂಲಕ ಮಕ್ಕಳನ್ನು ಶಿಕ್ಷಣದತ್ತ ಸೆಳೆಯುವ, ಸದೃಢ ಭಾರತ ನಿರ್ಮಿಸುವ ಸಂಸ್ಥೆಯ ಈ 25 ವರ್ಷಗಳ ಪಯಣವು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ’ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಲಾ ಮಕ್ಕಳ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಕ್ಷಯಪಾತ್ರ ಫೌಂಡೇಷನ್, 500 ಕೋಟಿ ಊಟ ವಿತರಿಸಿದ ಸಾಧನೆ ಮಾಡಿದೆ. </p>.<p>ಸಂಸ್ಥೆಯು 25 ವರ್ಷಗಳ ಅವಧಿಯಲ್ಲಿ, ಕೇಂದ್ರ ಸರ್ಕಾರದ ‘ಪಿಎಂ ಪೋಷಣ್’ ಯೋಜನೆಯಡಿ ಈ ಸಾಧನೆ ಮಾಡಿದೆ. ಕೇಂದ್ರ ಸರ್ಕಾರವು ‘ವಿಕಸಿತ ಭಾರತಕ್ಕಾಗಿ ಪೌಷ್ಟಿಕ ಮತ್ತು ಸುಶಿಕ್ಷಿತ ಭಾರತ’ ಎಂಬ ಆಶಯದೊಂದಿಗೆ, ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇದೇ 17ರಂದು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ. </p>.<p>ಫೌಂಡೇಷನ್ನ ಅಧ್ಯಕ್ಷ ಮಧು ಪಂಡಿತ ದಾಸ, ಉಪಾಧ್ಯಕ್ಷ ಚಂಚಲಪತಿ ದಾಸ ಹಾಗೂ ಟ್ರಸ್ಟಿಗಳು ಪಾಲ್ಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸ್ಥೆಯ ಪ್ರತಿನಿಧಿಗಳನ್ನು ಗೌರವಿಸಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. </p>.<p>‘2000ನೇ ಇಸವಿಯಲ್ಲಿ ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಆರಂಭವಾದ ಅಕ್ಷಯಪಾತ್ರದ ಮಧ್ಯಾಹ್ನದ ಬಿಸಿಯೂಟ ಯೋಜನೆ, ಇಂದು ಹೆಮ್ಮರವಾಗಿ ಬೆಳೆದಿದೆ. ಪ್ರಸ್ತುತ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಸುಮಾರು 23.5 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪ್ರತಿದಿನ ಪೌಷ್ಟಿಕ ಆಹಾರವನ್ನು ತಲುಪಿಸಲಾಗುತ್ತಿದೆ. ಶಾಲಾ ಹಂತದಲ್ಲಿಯೇ ಹಸಿವನ್ನು ನೀಗಿಸುವ ಮೂಲಕ ಮಕ್ಕಳನ್ನು ಶಿಕ್ಷಣದತ್ತ ಸೆಳೆಯುವ, ಸದೃಢ ಭಾರತ ನಿರ್ಮಿಸುವ ಸಂಸ್ಥೆಯ ಈ 25 ವರ್ಷಗಳ ಪಯಣವು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ’ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>