ಭಾರತೀಯ ವಿದ್ಯಾಭವನದ ಅಧ್ಯಕ್ಷ ಕೆ.ಜಿ. ರಾಘವನ್ ಅವರು, ‘ಸಂಸ್ಕೃತಿ ಮತ್ತು ತಂತ್ರಜ್ಞಾನದ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾರತೀಯ ವಿದ್ಯಾಭವನ ಸಂಸ್ಕೃತಿಯ ಪ್ರತೀಕವಾಗಿದ್ದರೆ, ಇನ್ಫೋಸಿಸ್ ತಂತ್ರಜ್ಞಾನದ ಪ್ರತೀಕವಾಗಿದೆ. ಬೊಂಬೆ ಹಬ್ಬದ ಸಂಸ್ಕೃತಿ ಉಳಿಸಿ-ಬೆಳೆಸಲು ಇದು ಮೊದಲ ಹೆಜ್ಜೆಯಾಗಿದೆ’ ಎಂದರು.