<p><strong>ಬೆಂಗಳೂರು</strong>: ಅಲೆಮಾರಿ ಸಮುದಾಯಗಳ ಏಳಿಗೆಗೆ ಬಜೆಟ್ನಲ್ಲಿ ಕನಿಷ್ಠ ₹ 250 ಕೋಟಿ ಮೀಸಲಿಡುವಂತೆ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.</p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ 74 ಅಲೆಮಾರಿ ಸಮುದಾಯಗಳಿವೆ. ಅಲೆಮಾರಿ ಅಭಿವೃದ್ಧಿ ಕೋಶ ರಚಿಸಲಾಗಿದ್ದು, ಅನುದಾನ ಇಲ್ಲದೆ ಯಾವುದೇ ಪ್ರಯೋಜನಕ್ಕೆ ಬರುತ್ತಿಲ್ಲ. ಈ ಕೋಶವನ್ನೇ ಅಲಮಾರಿ ಅಭಿವೃದ್ಧಿ ನಿಗಮವಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಮಹಾಸಭಾದ ಮುಖಂಡರು ಮನವಿ ಸಲ್ಲಿಸಿದರು.</p>.<p>ರಾಜ್ಯದಲ್ಲಿ ಅಲೆಮಾರಿ ಸಮುದಾಯದ2 ಲಕ್ಷ ಜನರಿದ್ದು, ಕೌದಿ ಬಟ್ಟೆಗಳಿಂದ ಟೆಂಟ್ಗಳನ್ನು ನಿರ್ಮಿಸಿಕೊಂಡು ಪ್ರಾಣಿಗಳಂತೆ ಜೀವನ ಮಾಡುತ್ತಿದ್ದಾರೆ. ಇವರಿಗೆ ಶಾಶ್ವತ ಸೂರು ಒದಗಿಸಲು ಬಜೆಟ್ನಲ್ಲಿ ‘ಟೆಂಟ್ ಮುಕ್ತ ಕರ್ನಾಟಕ’ದ ಘೋಷಣೆ ಮಾಡಬೇಕು. ಅದಕ್ಕಾಗಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕಿಗೆ ಒಂದು ನವಗ್ರಾಮ ನಿರ್ಮಾಣ ಮಾಡಿ ಅಲ್ಲಿ ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಬೇಕು. ಅಲೆಮಾರಿಗಳ ಪಾರಂಪರಿಕ ವೃತ್ತಿಗೆ ಆಧುನಿಕ ಸ್ಪರ್ಶ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಬಜೆಟ್ ₹5 ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಅಲೆಮಾರಿ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಮೀಕ್ಷೆ ನಡೆಸಬೇಕು. ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಅಲೆಮಾರಿ ಸಮುದಾಯ ಭವನಗಳನ್ನು ನಿರ್ಮಿಸಲು ತಲಾ ₹5 ಕೋಟಿ ಪ್ರತ್ಯೇಕ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಲೆಮಾರಿ ಸಮುದಾಯಗಳ ಏಳಿಗೆಗೆ ಬಜೆಟ್ನಲ್ಲಿ ಕನಿಷ್ಠ ₹ 250 ಕೋಟಿ ಮೀಸಲಿಡುವಂತೆ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.</p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ 74 ಅಲೆಮಾರಿ ಸಮುದಾಯಗಳಿವೆ. ಅಲೆಮಾರಿ ಅಭಿವೃದ್ಧಿ ಕೋಶ ರಚಿಸಲಾಗಿದ್ದು, ಅನುದಾನ ಇಲ್ಲದೆ ಯಾವುದೇ ಪ್ರಯೋಜನಕ್ಕೆ ಬರುತ್ತಿಲ್ಲ. ಈ ಕೋಶವನ್ನೇ ಅಲಮಾರಿ ಅಭಿವೃದ್ಧಿ ನಿಗಮವಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಮಹಾಸಭಾದ ಮುಖಂಡರು ಮನವಿ ಸಲ್ಲಿಸಿದರು.</p>.<p>ರಾಜ್ಯದಲ್ಲಿ ಅಲೆಮಾರಿ ಸಮುದಾಯದ2 ಲಕ್ಷ ಜನರಿದ್ದು, ಕೌದಿ ಬಟ್ಟೆಗಳಿಂದ ಟೆಂಟ್ಗಳನ್ನು ನಿರ್ಮಿಸಿಕೊಂಡು ಪ್ರಾಣಿಗಳಂತೆ ಜೀವನ ಮಾಡುತ್ತಿದ್ದಾರೆ. ಇವರಿಗೆ ಶಾಶ್ವತ ಸೂರು ಒದಗಿಸಲು ಬಜೆಟ್ನಲ್ಲಿ ‘ಟೆಂಟ್ ಮುಕ್ತ ಕರ್ನಾಟಕ’ದ ಘೋಷಣೆ ಮಾಡಬೇಕು. ಅದಕ್ಕಾಗಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕಿಗೆ ಒಂದು ನವಗ್ರಾಮ ನಿರ್ಮಾಣ ಮಾಡಿ ಅಲ್ಲಿ ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಬೇಕು. ಅಲೆಮಾರಿಗಳ ಪಾರಂಪರಿಕ ವೃತ್ತಿಗೆ ಆಧುನಿಕ ಸ್ಪರ್ಶ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಬಜೆಟ್ ₹5 ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಅಲೆಮಾರಿ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಮೀಕ್ಷೆ ನಡೆಸಬೇಕು. ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಅಲೆಮಾರಿ ಸಮುದಾಯ ಭವನಗಳನ್ನು ನಿರ್ಮಿಸಲು ತಲಾ ₹5 ಕೋಟಿ ಪ್ರತ್ಯೇಕ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>