ಚಿನ್ನಪ್ಪ ಗಾರ್ಡನ್ನಲ್ಲಿ ಜ.31ರಂದು ಸಂತೋಷ್ ಹತ್ಯೆ ನಡೆದಿತ್ತು. ಈ ಸಂಬಂಧ ಕಾಂಗ್ರೆಸ್ನ ಜೆ.ಸಿ.ನಗರ ಬ್ಲಾಕ್ ಅಧ್ಯಕ್ಷ ಖಾದರ್ ಅವರ ಮಗ ವಾಸೀಂ, ಫಿಲಿಪ್ಸ್, ಇರ್ಫಾನ್ ಹಾಗೂ ಉಮರ್ ಎಂಬುವರನ್ನು ಜೆ.ಸಿ.ನಗರ ಪೊಲೀಸರು ಬಂಧಿಸಿದ್ದರು. ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರು ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿದ್ದರು.