‘ಕಾಂತರಾಜ ಅವರ ನೇತೃತ್ವದಲ್ಲಿ ನಡೆದ ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸ್ವೀಕರಿಸಿ ಅದನ್ನು ಬಹಿರಂಗಗೊಳಿಸಬೇಕು. ಇದರಿಂದ, ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಸ್ಥಿತಿಯ ವಾಸ್ತವ ಅರಿಯಲು ವರದಿ ಸಹಾಯಕವಾಗಲಿದೆ. ನಂತರ ಅದನ್ನು ಸಾರ್ವಜನಿಕರ ಚರ್ಚೆಗೊಳಪಡಿಸಿ, ಅದರ ಸಾದಕ–ಬಾಧಕಗಳನ್ನು ಪರಾಮರ್ಶಿಸಿ ನಂತರ ಅದನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.