<p><strong>ಬೆಂಗಳೂರು:</strong> ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದ ಅಡಿ ಲೇಖಕಿ ಹಾಗೂ ಅವರ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಪಿಎಸ್ಐಯೊಬ್ಬರು ನೀಡಿದ ದೂರಿನ ಮೇರೆಗೆ ಉಲ್ಲಾಳ ಮುಖ್ಯರಸ್ತೆಯ ನಂದನ ತೋಟದ ನಿವಾಸಿ ಲಕ್ಷ್ಮಿ ಜಿ. ಪ್ರಸಾದ್ ಹಾಗೂ ಅವರ ಪುತ್ರ ಅರವಿಂದ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಲಕ್ಷ್ಮಿ ಜಿ.ಪ್ರಸಾದ್ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿತ್ತು. ಕೋರ್ಟ್ ಸೂಚನೆ ಮೇರೆಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಹಿರಿಯ ಅಧಿಕಾರಿಗಳು, ಪಿಎಸ್ಐಗೆ ಸೂಚನೆ ನೀಡಿದ್ದರು.</p>.<p>ಅ.23ರಂದು ಲಕ್ಷ್ಮಿ ಜಿ.ಪ್ರಸಾದ್ ಅವರನ್ನು ಪಿಎಸ್ಐ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಆಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದ ಅಡಿ ಲೇಖಕಿ ಹಾಗೂ ಅವರ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಪಿಎಸ್ಐಯೊಬ್ಬರು ನೀಡಿದ ದೂರಿನ ಮೇರೆಗೆ ಉಲ್ಲಾಳ ಮುಖ್ಯರಸ್ತೆಯ ನಂದನ ತೋಟದ ನಿವಾಸಿ ಲಕ್ಷ್ಮಿ ಜಿ. ಪ್ರಸಾದ್ ಹಾಗೂ ಅವರ ಪುತ್ರ ಅರವಿಂದ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಲಕ್ಷ್ಮಿ ಜಿ.ಪ್ರಸಾದ್ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿತ್ತು. ಕೋರ್ಟ್ ಸೂಚನೆ ಮೇರೆಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಹಿರಿಯ ಅಧಿಕಾರಿಗಳು, ಪಿಎಸ್ಐಗೆ ಸೂಚನೆ ನೀಡಿದ್ದರು.</p>.<p>ಅ.23ರಂದು ಲಕ್ಷ್ಮಿ ಜಿ.ಪ್ರಸಾದ್ ಅವರನ್ನು ಪಿಎಸ್ಐ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಆಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>