<p><strong>ಬೆಂಗಳೂರು</strong>: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಪ್ರಭಾವ ಹೊಂದಿದ ಜಿಜೆಪಿಯ ಜಿ.ಎಸ್.ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆಯ ಸುಭಾನ್ ಖಾನ್ ಸಲ್ಲಿಸಿರುವ ಈ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇತರ ಅಭ್ಯರ್ಥಿಗಳು ಹಾಗೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.</p>.<p>ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.</p>.<p>‘ಪ್ರಭಾ ಮಲ್ಲಿಕಾರ್ಜುನ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡಿದ್ದಾರೆ. ಮಹಿಳೆಯರಿಗೆ ₹1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಹಲವು ಚುನಾವಣಾ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಇದು ಜನಪ್ರಾತಿನಿಧ್ಯ ಕಾಯ್ದೆಗೆ ವಿರುದ್ಧವಾಗಿರುವ ಕಾರಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಪ್ರಭಾವ ಹೊಂದಿದ ಜಿಜೆಪಿಯ ಜಿ.ಎಸ್.ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆಯ ಸುಭಾನ್ ಖಾನ್ ಸಲ್ಲಿಸಿರುವ ಈ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇತರ ಅಭ್ಯರ್ಥಿಗಳು ಹಾಗೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.</p>.<p>ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.</p>.<p>‘ಪ್ರಭಾ ಮಲ್ಲಿಕಾರ್ಜುನ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡಿದ್ದಾರೆ. ಮಹಿಳೆಯರಿಗೆ ₹1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಹಲವು ಚುನಾವಣಾ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಇದು ಜನಪ್ರಾತಿನಿಧ್ಯ ಕಾಯ್ದೆಗೆ ವಿರುದ್ಧವಾಗಿರುವ ಕಾರಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>