ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಸಲ್ಲಿಸಿರುವ ಅಮೃತ್ರಾಜ್, ‘25–30 ಅಡಿ ಎತ್ತರವಿರುವ ಅಂಗಡಿಗಳ ನಾಮಫಲಕಗಳಲ್ಲಿನ ಇಂಗ್ಲಿಷ್ ಪದಗಳಿಗೆ ಬಟ್ಟೆ ಮುಚ್ಚಲು, ಬಣ್ಣ ಬಳಿಯಲು ಹೇಳಲಾಗಿದೆ. ಇದಕ್ಕಾಗಿ ಯಾವುದೇ ಸಲಕರಣೆ, ಸಾಮಗ್ರಿಗಳನ್ನು ನೀಡಿಲ್ಲ. ಮುಖ್ಯ ಆಯುಕ್ತರ ಆದೇಶವನ್ನು ಪಾಲಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಅವರಿಗೆ ಈ ರೀತಿಯ ಶಿಕ್ಷೆ ನೀಡುವುದು ಸರಿಯಲ್ಲ. ಕೂಡಲೇ ಅಮಾನತು ಆದೇಶ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಂಘದ ವತಿಯಿಂದ ಹೋರಾಟ ಮಾಡಲಾಗತ್ತದೆ’ ಎಂದು ತಿಳಿಸಿದ್ದಾರೆ.