ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಗಳು ಯಾರನ್ನೂ ಬಿಟ್ಟಿಲ್ಲ: ರಾಮಲಿಂಗಾ ರೆಡ್ಡಿ

Last Updated 15 ಅಕ್ಟೋಬರ್ 2021, 19:52 IST
ಅಕ್ಷರ ಗಾತ್ರ

ಬೆಂಗಳೂರು: ‘ದಕ್ಷ ಹಾಗೂ ಪ್ರಾಮಾಣಿಕರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಅವರನ್ನೂ ಆರೋಪಗಳು ಬಿಟ್ಟಿರಲಿಲ್ಲ. ಗಾಳಿ ಮಾತಿನ ಚರ್ಚೆಗೆ ಹೆಚ್ಚು ಮಹತ್ವ ನೀಡಬಾರದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.

ಪಕ್ಷದ ಮುಖಂಡರಾದ ಸಲೀಂ ಮತ್ತು ವಿ.ಎಸ್‌. ಉಗ್ರಪ್ಪ ಮಾತನಾಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಲಂಚದ ಆರೋಪ ಮಾಡಿರುವ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ರಾಜಾಜಿನಗರದಲ್ಲಿರುವ ನಿವೇಶನಗಳೆಲ್ಲ ನಿಜಲಿಂಗಪ್ಪ ಅವರದ್ದು ಎಂದು ಆರೋಪ ಮಾಡುತ್ತಿದ್ದರು. ಆದರೆ, ಅವರು ಇಡೀ ಬೆಂಗಳೂರಿನಲ್ಲಿ ಒಂದು ನಿವೇಶನ ಕೂಡ ಹೊಂದಿರಲಿಲ್ಲ’ ಎಂದರು.

ಕಾಂಗ್ರೆಸ್‌ ನೇತೃತ್ವದ ಸರ್ಕಾರದಲ್ಲಿ ‘ಪರ್ಸೆಂಟೇಜ್‌’ ವ್ಯವಹಾರ ಇರಲಿಲ್ಲ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಶೂನ್ಯ ‘ಪರ್ಸೆಂಟೇಜ್‌’ ಇದ್ದರೆ, ಈಗ ಬಿಜೆಪಿ ಸರ್ಕಾರದಲ್ಲಿ ಶೇಕಡ 20ಕ್ಕೇರಿದೆ. ಸಲೀಂ ಶೇಕಡ 12ರ ‘ಪರ್ಸೆಂಟೇಜ್‌’ ಕುರಿತು ಮಾತನಾಡಿರುವುದು ಶುದ್ಧ ಸುಳ್ಳು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT