<p><strong>ಯಲಹಂಕ:</strong> ಹೆಬ್ಬಾಳದ ಪಶು ವೈದ್ಯಕೀಯ ಮತ್ತು ಪಶು, ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಹಂಗಾಮಿ ನೌಕರರನ್ನು ಕಾಯಂಗೊಳಿಸುವ ನೆಪದಲ್ಲಿ ವಿಶ್ವವಿದ್ಯಾಲಯದ ಮೂವರು ಆಡಳಿತ ಮಂಡಳಿ ಸದಸ್ಯರು ಹಣಪಡೆದು ವಂಚಿಸಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಹಾಗೂ ನೌಕರರು ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ರಾಜ್ಯ ಘಟಕದ ಅಧ್ಯಕ್ಷ ಮುನಿ ಆಂಜಿನಪ್ಪ ಮಾತನಾಡಿ, ‘ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರೊಬ್ಬರು ನೌಕರರಿಂದ ₹ 1 ಲಕ್ಷದವರೆಗೆ ಹಣ ಪಡೆದು ವಂಚಿಸಿದ್ದಾರೆ’ ಎಂದು ದೂರಿದರು.</p>.<p>‘ವಂಚನೆಗೊಳಗಾದ ನೌಕರರು ಹಣ ವಾಪಸು ಮಾಡುವಂತೆ ಕೇಳಿದರೆ ಬೆದರಿಕೆಯೊಡ್ಡಿದ್ದಾರೆ. ಅವರ ಕೃತ್ಯಕ್ಕೆ ಇನ್ನಿಬ್ಬರು ಸದಸ್ಯರು ಸಹಕರಿಸಿದ್ದು, ಸರ್ಕಾರ ಕೂಡಲೇ ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಈ ಮೂವರ ಸದಸ್ಯತ್ವವನ್ನು ರದ್ದುಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ.ನಾಗರಾಜ್ ಮಾತನಾಡಿ, ‘50ಕ್ಕೂ ಹೆಚ್ಚು ನೌಕರರಿಂದ ಹಣ ಪಡೆದು ವಂಚಿಸಿರುವ ಈ ಮೂವರ ವಿರುದ್ಧ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಪೊಲೀಸರು ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ’ ಎಂದರು.</p>.<p>ಪ್ರತಿಭಟನಕಾರರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ದಸಂಸ (ನಾಗವಾರ ಬಣ) ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಗವಾರ, ಮುಖಂಡರಾದ ಹೆಬ್ಬಾಳ ವೆಂಕಟೇಶ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಹೆಬ್ಬಾಳದ ಪಶು ವೈದ್ಯಕೀಯ ಮತ್ತು ಪಶು, ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಹಂಗಾಮಿ ನೌಕರರನ್ನು ಕಾಯಂಗೊಳಿಸುವ ನೆಪದಲ್ಲಿ ವಿಶ್ವವಿದ್ಯಾಲಯದ ಮೂವರು ಆಡಳಿತ ಮಂಡಳಿ ಸದಸ್ಯರು ಹಣಪಡೆದು ವಂಚಿಸಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಹಾಗೂ ನೌಕರರು ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ರಾಜ್ಯ ಘಟಕದ ಅಧ್ಯಕ್ಷ ಮುನಿ ಆಂಜಿನಪ್ಪ ಮಾತನಾಡಿ, ‘ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರೊಬ್ಬರು ನೌಕರರಿಂದ ₹ 1 ಲಕ್ಷದವರೆಗೆ ಹಣ ಪಡೆದು ವಂಚಿಸಿದ್ದಾರೆ’ ಎಂದು ದೂರಿದರು.</p>.<p>‘ವಂಚನೆಗೊಳಗಾದ ನೌಕರರು ಹಣ ವಾಪಸು ಮಾಡುವಂತೆ ಕೇಳಿದರೆ ಬೆದರಿಕೆಯೊಡ್ಡಿದ್ದಾರೆ. ಅವರ ಕೃತ್ಯಕ್ಕೆ ಇನ್ನಿಬ್ಬರು ಸದಸ್ಯರು ಸಹಕರಿಸಿದ್ದು, ಸರ್ಕಾರ ಕೂಡಲೇ ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಈ ಮೂವರ ಸದಸ್ಯತ್ವವನ್ನು ರದ್ದುಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ.ನಾಗರಾಜ್ ಮಾತನಾಡಿ, ‘50ಕ್ಕೂ ಹೆಚ್ಚು ನೌಕರರಿಂದ ಹಣ ಪಡೆದು ವಂಚಿಸಿರುವ ಈ ಮೂವರ ವಿರುದ್ಧ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಪೊಲೀಸರು ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ’ ಎಂದರು.</p>.<p>ಪ್ರತಿಭಟನಕಾರರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ದಸಂಸ (ನಾಗವಾರ ಬಣ) ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಗವಾರ, ಮುಖಂಡರಾದ ಹೆಬ್ಬಾಳ ವೆಂಕಟೇಶ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>