<p><strong>ಬೆಂಗಳೂರು:</strong> ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿದ್ಯುತ್ ವಿಭಾಗದಲ್ಲಿ ನಡೆಸಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವೈಭವ ಕರ್ನಾಟಕ ಭೂ ರಕ್ಷಣಾ ವೇದಿಕೆ ಆರೋಪಿಸಿದೆ.</p>.<p>2022–2023ನೇ ಸಾಲಿನಲ್ಲಿ ನಕಲಿ ಪರವಾನಗಿ ಮತ್ತು ಬ್ಯಾಂಕ್ ನಿಶ್ಚಿತ ಠೇವಣಿ (ಎಫ್ಡಿ) ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವ ಅನರ್ಹ ಗುತ್ತಿಗೆದಾರರಾದ ಗೀತಾ ಎಲೆಕ್ಟ್ರಾನಿಕ್ಸ್ಗೆ ಹಾಗೂ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಾನಿಕ್ಸ್ ಮತ್ತು ಅರವಿಂದ ಎಲೆಕ್ಟ್ರಾನಿಕ್ಸ್ಗೆ ಅಕ್ರಮವಾಗಿ ಟೆಂಡರ್ ಹಂಚಿಕೆ ಮಾಡಲಾಗಿದೆ. ಈ ಮೂರು ಗುತ್ತಿಗೆದಾರ ಕಂಪನಿಗಳು ಒಂದೇ ಮನೆಯವರದ್ದಾಗಿವೆ ಎಂದು ವೇದಿಕೆಯ ಅಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜಗದೀಶ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಗುತ್ತಿಗೆ ಪಡೆದವರು ಯಾವುದೇ ಕಾಮಗಾರಿ ನಡೆಸಿಲ್ಲ. ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಕೇಳಿದರೆ ಅಧಿಕಾರಿಗಳು ಮಾಹಿತಿಯನ್ನೂ ನೀಡುತ್ತಿಲ್ಲ. ಅಕ್ರಮವಾಗಿ ಗುತ್ತಿಗೆ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವೇದಿಕೆಯ ಹರೀಶ್, ಭಗವಾನ್, ಬಸವರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿದ್ಯುತ್ ವಿಭಾಗದಲ್ಲಿ ನಡೆಸಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವೈಭವ ಕರ್ನಾಟಕ ಭೂ ರಕ್ಷಣಾ ವೇದಿಕೆ ಆರೋಪಿಸಿದೆ.</p>.<p>2022–2023ನೇ ಸಾಲಿನಲ್ಲಿ ನಕಲಿ ಪರವಾನಗಿ ಮತ್ತು ಬ್ಯಾಂಕ್ ನಿಶ್ಚಿತ ಠೇವಣಿ (ಎಫ್ಡಿ) ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವ ಅನರ್ಹ ಗುತ್ತಿಗೆದಾರರಾದ ಗೀತಾ ಎಲೆಕ್ಟ್ರಾನಿಕ್ಸ್ಗೆ ಹಾಗೂ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಾನಿಕ್ಸ್ ಮತ್ತು ಅರವಿಂದ ಎಲೆಕ್ಟ್ರಾನಿಕ್ಸ್ಗೆ ಅಕ್ರಮವಾಗಿ ಟೆಂಡರ್ ಹಂಚಿಕೆ ಮಾಡಲಾಗಿದೆ. ಈ ಮೂರು ಗುತ್ತಿಗೆದಾರ ಕಂಪನಿಗಳು ಒಂದೇ ಮನೆಯವರದ್ದಾಗಿವೆ ಎಂದು ವೇದಿಕೆಯ ಅಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜಗದೀಶ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಗುತ್ತಿಗೆ ಪಡೆದವರು ಯಾವುದೇ ಕಾಮಗಾರಿ ನಡೆಸಿಲ್ಲ. ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಕೇಳಿದರೆ ಅಧಿಕಾರಿಗಳು ಮಾಹಿತಿಯನ್ನೂ ನೀಡುತ್ತಿಲ್ಲ. ಅಕ್ರಮವಾಗಿ ಗುತ್ತಿಗೆ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವೇದಿಕೆಯ ಹರೀಶ್, ಭಗವಾನ್, ಬಸವರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>