‘ಆರೋಪಿ ನಾರಾಯಣಸ್ವಾಮಿ ಅಪರಾಧ ಹಿನ್ನೆಲೆಯುಳ್ಳವ. ಹಲ್ಲೆ, ಜೀವ ಬೆದರಿಕೆ, ಅಪಹರಣ, ವಂಚನೆ, ಲೈಂಗಿಕ ದೌರ್ಜನ್ಯ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಾರಾಯಣಸ್ವಾಮಿ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರ ಠಾಣೆಯ ರೌಡಿ ಪಟ್ಟಿಯಲ್ಲೂ ಈತನ ಹೆಸರಿದೆ’ ಎಂದಿದ್ದಾರೆ.